ಹಿರಿಯ ಜಾನಪದ ಕಲಾವಿದ ನಿಂಗೌಡ ಪಾಟೀಲ್ ರವರಿಗೆ ಗೌ. ಡಾಕ್ಟರೇಟ್ ಪುರಸ್ಕಾರ

Upayuktha
0


ಬೆಂಗಳೂರು: ತಮಿಳುನಾಡು ಹೊಸೂರಿನಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಪೂಜ್ಯ ಡಾ. ಕೃಷ್ಣಮೂರ್ತಿ ಮಹಾಸ್ವಾಮಿಗಳು, ಸಂಸ್ಕೃತಿ ಚಿಂತಕ ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಮೊದಲಾದ ಗಣ್ಯಮಾನ್ಯರ ಸಮಕ್ಷಮದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆ ಯಮಕನಮರಡಿ ಮಾಸ್ತಿ ಹೊಳೆಯ ಹಿರಿಯ ಜಾನಪದ ಕಲಾವಿದ ಗಾಯಕ ನಿಂಗೌಡ ಪಾಟೀಲ್‌ರವರು ಭಾಜನರಾಗಿದ್ದಾರೆ.


ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಣವ ಮೀಡಿಯಾ ಹೌಸ್ ಪ್ರಕಾಶನ ದ ಗುರುರಾಜ ಪೋಶೆಟ್ಟಿಹಳ್ಳಿ ಮಾತನಾಡುತ್ತ, ಎಲೆ ಮರೆಯ ಕಾಯಿಯಂತೆ ಸದ್ದಿದಿಲ್ಲದೆ ಸೇವೆ ಮಾಡುತ್ತಿರುವ ಸಾಧಕರನ್ನು ಗೌರವಿಸುವ ಈ ಕಾರ್ಯ ಅಭಿನಂದನೀಯ. ಸರ್ಕಾರ ಗುರುತಿಸಿ ಉನ್ನತ ಪುರಸ್ಕಾರಗಳು ಲಭಿಸುವಂತಾಗಲಿ ಎಂದು ತಿಳಿಸಿದರು.


ಇದೆ ಸಂದರ್ಭದಲ್ಲಿ ಯಮಕನಮರಡಿಯ ಕರಕುಶಲ ಕಲಾವಿದ ಸೋಮಶೇಖರ ಹೊರಕೇರಿರವರಿಗೆ ನಿತ್ಯೋತ್ಸವ ಕನ್ನಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಅವರು 550 ಸಾಮೂಹಿಕ ವಿವಾಹಗಳಿಗೆ ಬಾಸಿಂಗವನ್ನು ಉಚಿತವಾಗಿ ನೀಡಿರುತ್ತಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top