ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ತೆರೆ: ಮೂರು ವಿಭಾಗಗಳಲ್ಲಿ ಭಾರತಕ್ಕೆ ಸ್ವರ್ಣ

Upayuktha
0

ಮಹಿಳೆಯರ ಡಬಲ್ಸ್‌ನಲ್ಲಿ ಥಾಯ್ಲೆಂಡ್, ಪುರುಷರ ಡಬಲ್ಸ್‌ನಲ್ಲಿ ಸಿಂಗಾಪುರಕ್ಕೆ ಅಗ್ರಸ್ಥಾನ

ಯೋನೆಕ್ಸ್- ಸನ್ ರೈಸ್ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025


ಚಿತ್ರಗಳು: ಮಂಜು ಪಾಲ್



ಮಂಗಳೂರು: ನಗರದ ನ್ಯೂ ಉರ್ವ ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ ಯೋನೆಕ್ಸ್ - ಸನ್ ರೈಸ್ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಬ್ಯಾಡ್ಮಿಂಟನ್ ಪಂದ್ಯಾಟದ ಫೈನಲ್ ಪಂದ್ಯಗಳ ಫಲಿತಾಂಶ ವಿವರ ಇಂತಿದೆ:


ಮಹಿಳೆಯರ ಡಬಲ್ಸ್‌ ಪಂದ್ಯದಲ್ಲಿ 5ನೇ ಶ್ರೇಯಾಂಕದ ಥಾಯ್ಲೆಂಡಿನ ಆಟಗಾರರಾದ ಹತಾಯ್‌ತಿಪ್ ಮಿಜದ್ ಮತ್ತು ನಪಪಕೊರ್ನ್ ತುಂಗ್ಕಸತಾನ್ ಜೋಡಿಯು ಭಾರತದ ಶ್ರೀನಿಧಿ ನಾರಾಯಣನ್ ಮತ್ತು ರೆಶಿಕಾ ಉತಯಸೂರ್ಯನ್ ಜೋಡಿಯನ್ನು 21-7, 21-11 ಸೆಟ್‌ಗಳಿಂದ ಪರಾಭವಗೊಳಿಸಿ ಚಾಂಪಿಯನ್ ಪಟ್ಟಕ್ಕೇರಿತು. ಭಾರತದ ಜೋಡಿ ರನ್ನರ್ ಅಪ್ ಪಟ್ಟಕ್ಕೆ ತೃಪ್ತಿಪಟ್ಟುಕೊಂಡಿತು.




ಮಹಿಳೆಯರ ಸಿಂಗಲ್ಸ್‌ ಪಂದ್ಯಾಟದಲ್ಲಿ 3ನೇ ಶ್ರೇಯಾಂಕದ ಭಾರತದ ಮಾನ್ಸಿ ಸಿಂಗ್ ಅವರು ಚಾಂಪಿಯನ್ ಆಗಿ ಆಯ್ಕೆಯಾದರು. ಅವರ ಎದುರಾಳಿ ಆಟಗಾರ್ತಿ 4ನೇ ಶ್ರೇಯಾಂಕದ  ಭಾರತದ ಅಶ್ಮಿತಾ ಚಲಿಹಾ  ರನ್ನರ್‌ ಅಪ್‌ ಆಗಿ ಮಾನ್ಯತೆ ಪಡೆದರು. ಸ್ಕೋರ್ ವಿವರ: 21-17, 22-20.


ದಕ್ಷಿಣ ಕನ್ನಡ ಬ್ಯಾಡ್ಮಿಂಟನ್‌ ಅಸೋಸಿಯೇಶನ್ ಅಧ್ಯಕ್ಷರಾದ ಸಂತೋಷ್ ಮತ್ತು ಕಾರ್ಯದರ್ಶಿ ಸುಪ್ರೀತ್ ಆಳ್ವ ಅವರು ವಿಜೇತರಿಗೆ ಪದಕ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.



ಪುರುಷರ ಸಿಂಗಲ್ಸ್‌ ಪಂದ್ಯದಲ್ಲಿ ಮತ್ತೆ ಭಾರತದ್ದೇ ಜೋಡಿ ಮುಖಾಮುಖಿಯಾದರು. ಅಗ್ರ ಶ್ರೇಯಾಂಕದ ರಿತ್ವಿಕ್ ಸಂಜೀವಿ ಸತೀಶ್ ಕುಮಾರ್‌ ಚಾಂಪಿಯನ್ ಪಟ್ಟ ಗಳಿಸಿದರು. ಎದುರಾಳಿ ಆಟಗಾರ ರೌನಕ್ ಚೌಹಾಣ್ ರನ್ನರ್ ಅಪ್ ಸ್ಥಾನ ಪಡೆದರು. ಸ್ಕೋರ್ ವಿವರ: 14-21, 21-19, 21-19.



ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ವಿಜೇತರಿಗೆ ಪದಕ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.


ಮಿಕ್ಸೆಡ್‌ ಡಬಲ್ಸ್‌ನಲ್ಲಿ ಭಾರತದ ಎರಡನೇ ಶ್ರೇಯಾಂಕದ ಧ್ರುವ ರಾವತ್ ಮತ್ತು ಮನೀಷಾ ಕೆ ಜೋಡಿಯು 18-21, 21-18 ಮತ್ತು 22-20 ಸೆಟ್‌ಗಳಿಂದ ಎದುರಾಳಿ ಥಾಯ್ಲೆಂಡಿನ ತನಾವಿನ್ ಮ್ಯಾದೀ ಮತ್ತು ನಪಪಕೊರ್ನ್ ತುಂಗ್ಕಸತಾನ್ ಜೋಡಿಯನ್ನು ಮಣಿಸಿ ಚಾಂಪಿಯನ್ ಪಟ್ಟ ಗಳಿಸಿತು. ಈ ಪಂದ್ಯ ಕೊನೆಯ ವರೆಗೂ ರೋಚಕತೆಯನ್ನು ಕಾಯ್ದುಕೊಂಡು ಪ್ರೇಕ್ಷಕರ ಮೆಚ್ಚುಗೆ ಗಳಿಸಿತು.




ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಚಾಂಪಿಯನ್‌ಗಳಿಗೆ ಪದಕ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.


ಕೊನೆಯದಾಗಿ ನಡೆದ ಪುರುಷರ ಡಬಲ್ಸ್‌ ನಲ್ಲಿ ಸಿಂಗಾಪುರದ ಎರಡು ತಂಡಗಳು ಮುಖಾಮುಖಿಯಾದವು. ಎಂಗ್‌ ಕೀಟ್ ವೆಸ್ಲಿ ಕೊಹ್ ಮತ್ತು ಅಗ್ರ ಶ್ರೇಯಾಂಕದ ಜುನ್‌ಸ್ಯುಕೆ ಕುಬೊ ಜೋಡಿಯು ಎದುರಾಳಿ 8ನೇ ಶ್ರೇಯಾಂಕದ ಡೊನೊವನ್ ವಿಲಾರ್ಡ್ ವೀ ಮತ್ತು ಜಿಯಾ ಹವೊ ಹೊವಿನ್ ವೊಂಗ್ ಜೋಡಿಯನ್ನು 21-12, 21-17 ಅಂಕಗಳಿಂದ ಮಣಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿತು.


ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಿಜೇತರಿಗೆ ಪದಕ, ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top