ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ವತಿಯಿಂದ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇವರ ಸಹಯೋಗದಲ್ಲಿ ಕನ್ನಡರಾಜ್ಯೋತ್ಸವ–ಕನ್ನಡ ಡಿಂಡಿಮ ಉಪನ್ಯಾಸ ಮತ್ತು ಯುವ ಪ್ರತಿಭೆಗಳಿಗೆ ನನ್ನ ನೆಚ್ಚಿನ ಸಾಹಿತಿ ಆಶುಭಾಷಣ ಸ್ಪರ್ಧೆಯು ನವೆಂಬರ್ 05 ರಂದು ಬೆಳಿಗ್ಗೆ 10.30 ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಸಮಾಜಕಾರ್ಯ ಉಪನ್ಯಾಸಕ ಮತ್ತು ಬರಹಗಾರ ಡಾ.ಗಣೇಶ್ ಪ್ರಸಾದ್ ಜಿ. ನಾಯಕ್ ಉದ್ಘಾಟಿಸಿ ಆಬೂವಿಂದ ಬರಾಮಕ್ಕೆ :ಒಂದು ದಿನದ ವಿಶಿಷ್ಟ ಪ್ರವಾಸ ಕಥನದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಸೋಜನ್ಕೆ.ಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷಡಾ.ಗಣನಾಥ ಶೆಟ್ಟಿಎಕ್ಕಾರು, ಕಾಲೇಜಿನಕನ್ನಡ ವಿಭಾಗದ ಮುಖ್ಯಸ್ಥೆಡಾ. ನಿಕೇತನ, ಐಕ್ಯೂಎಸಿಯ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ ಭಾಗವಹಿಸಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


