ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ: ವಿವೇಕಾನಂದ ಪಿಯು ಪೃಥ್ವಿಶ್ ಬಿ ರೈ SGFI ಗೆ ಆಯ್ಕೆ

Chandrashekhara Kulamarva
0


ಪುತ್ತೂರು: ಶ್ರೀ ಜಿ. ಬಾಬಾ ಸರಸ್ವತಿ ವಿದ್ಯಾಮಂದಿರ ಗೋವರ್ಧನ ಮಥುರಾ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ  ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಅಪೂರ್ವ ಸಾಧನೆಯನ್ನು ಮೆರೆದಿದ್ದಾರೆ. ಪ್ರಥಮ ವಿಜ್ಞಾನ ವಿಭಾಗದ  ಪೃಥ್ವಿಶ್ ಬಿ ರೈ ಇವರು ಚಿನ್ನದ ಪದಕವನ್ನು ಪಡೆದು ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯ (ಎಸ್.ಜಿ.ಎಫ್.ಐ) ನಡೆಸುವ ರಾಷ್ಟ್ರಮಟ್ಟದ ಕರಾಟೆ  ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ದ್ವಿತೀಯ ವಾಣಿಜ್ಯ  ವಿಭಾಗದ  ಪ್ರಾಪ್ತಿ ಶೆಟ್ಟಿ ಹಾಗೂ  ರಾಮ್ ಪ್ರಸಾದ್ ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ. ಪ್ರಥಮ ವಿಜ್ಞಾನ ವಿಭಾಗದ ಘನಶ್ಯಾಮ್ ಇವರು ಕಂಚಿನ ಪದಕವನ್ನು ಪಡೆದಿರುತ್ತಾರೆ. 


ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ. ಎಸ್., ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ಮಾರ್ಗದರ್ಶನದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top