ಉಡುಪಿ: ಕನ್ನಡ ಭಾಷೆಯ ಅಮೂಲ್ಯವಾದ ಸಾಹಿತ್ಯ ಪ್ರಕಾರಗಳನ್ನು ದೇಶದ ಇತರ ಭಾಷೆಗಳಿಗೆ ಭಾಷಾಂತರ ಮಾಡಬೇಕಾದ ಅಗತ್ಯತೆ ಇದೆ ಎಂದು ಖ್ಯಾತ ವಿದ್ವಾಂಸ ಕೀಲಿಮಣೆ ತಜ್ಞ ಪ್ರೊ. ಕೆ.ಪಿ ರಾವ್ ಹೇಳಿದರು.
ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರ ಕಾರ್ಡ್ ಉಡುಪಿ ಇವರ ಆಯೋಗದಲ್ಲಿ ನಡೆದ ನಾರಿ ಚೇತನ ಸಾಹಿತ್ಯದಲ್ಲಿ ಮಹಿಳಾ ಸಂವೇದನೆ ಕುರಿತ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಮ್ಮ ಭಾಷೆಯ ಈ ಗ್ರಂಥಗಳು ವಿದೇಶಗಳಿಗೆ ಕೂಡ ತಲುಪಲು ಭಾಷಾಂತರ ನೆರವಾಗುತ್ತದೆ ಎಂದರು.
ಸಂಸ್ಕೃತ ಭಾಷೆ ಸತ್ತ ಭಾಷೆ ಅಲ್ಲ ಪ್ರಪಂಚದಲ್ಲಿ ಇರುವ ಭಾಷೆಗಳಲ್ಲಿ ಅತ್ಯಂತ ಅಮೂಲ್ಯವಾದ ಭಾಷೆಗಳಲ್ಲಿ ಒಂದಾಗಿದೆ. ನಮ್ಮ ಸಂಸ್ಕೃತಿ ಬಗ್ಗೆ ಇರುವ ಸಂವೇದನೆಯನ್ನು ದೂರ ಮಾಡಬೇಕಾಗಿದೆ ಎಂದ ಅವರು, ಒಂದು ಭಾಷೆಯನ್ನು ಬಳಕೆ ಮಾಡಿದಷ್ಟು ಮತ್ತು ಗ್ರಾಂಥಿಕವಾಗಿ ಪ್ರಸಾರ ಮಾಡಿದಷ್ಟು ಅದರ ಬೆಳವಣಿಗೆ ಸಾಧ್ಯ ಎಂದರು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸೋಜನ್ ಕೆ ಉದ್ಘಾಟಿಸಿ ಶುಭ ಹಾರೈಸಿದರು. ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಮಂಡಳಿಯ ಸದಸ್ಯರಾದ ಚನ್ನಪ್ಪ ಅಂಗಡಿ ಅಕಾಡೆಮಿಯ ಕಾರ್ಯ ವೈಖರಿಯ ಕುರಿತು ಮಾಹಿತಿ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸಾಂಸ್ಕೃತಿಕ ನಗರಿ ಉಡುಪಿಯಲ್ಲಿ ಈ ರೀತಿಯ ವೈಶಿಷ್ಟ ಪೂರ್ಣ ಕಾರ್ಯಕ್ರಮ ನಡೆಯುತ್ತಿರುವುದು ಅಭಿನಂದನೀಯ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ ಮಾತನಾಡಿ, ಕಸಾಪ ಉಡುಪಿ ತಾಲೂಕು ವತಿಯಿಂದ ನಿರಂತರವಾಗಿ ವಿವಿಧ ಚಟುವಟಿಕೆಗಳು ನಡೆಯುತ್ತಿವೆ. ಮುಖ್ಯವಾಗಿ ಮನೆಯೇ ಗ್ರಂಥಾಲಯ ಮತ್ತು ಕಥೆ ಕೇಳೋಣ ಅಭಿಯಾನ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ವಿದ್ಯಾರ್ಥಿಗಳು ಕೂಡ ಈ ಕಾರ್ಯಕ್ರಮದ ಪ್ರಯೋಜನ ಪಡೆಯಲು ಕರೆ ನೀಡಿದರು.
ರಂಗಭೂಮಿಯಲ್ಲಿ ಮಹಿಳಾ ಧ್ವನಿ ಈ ವಿಷಯದ ಕುರಿತು ಸಾಹಿತಿ ಡಾ. ಕಾತ್ಯಾಯನಿ ಕುಂಜಿಬೆಟ್ಟು ವಿಷಯ ಮಂಡನೆ ಮಾಡಿದರು. ಅದೇ ರೀತಿ ತುಳುನಾಡಿನ ಮಹಿಳಾ ಸಾಹಿತ್ಯದ ಕುರಿತು ಉಪನ್ಯಾಸಕಿ ಡಾ. ನಿಕೇತನ, ಮಹಿಳಾ ಕಾದಂಬರಿಗಳಲ್ಲಿ ಸ್ತ್ರೀ ವಾದಿ ಚಿಂತನೆ ಬಗ್ಗೆ ಡಾ. ರೇಖಾ ಬನ್ನಾಡಿ ವಿಚಾರ ಮಂಡನೆ ಮಾಡಿದರು.
ಕನ್ನಡ ಉಪನ್ಯಾಸಕಿ ಡಾ. ಹೇಮಾವತಿ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಕಸಾಪ ಸಂ. ಕಾಯ೯ದಶಿ೯ ರಾಘವೇಂದ್ರ ಪ್ರಭು ಕವಾ೯ಲು ಸ್ವಾಗತಿಸಿದರು. ಸತೀಶ್ ಕೊಡವೂರು ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







