ಬ್ಯಾಂಕ್ ಆಫ್ ಬರೋಡಾ ವಲಯ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ

Upayuktha
0


ಮಂಗಳೂರು: 20 ನೇ ಕನ್ನಡ ರಾಜ್ಯೋತ್ಸವವನ್ನು, ಬ್ಯಾಂಕ್ ಆಫ್ ಬರೋಡಾ ವಲಯ ಕಛೇರಿ, ಮಂಗಳೂರಿನಲ್ಲಿ ನ.02 ರಂದು ಆಚರಿಸಲಾಯಿತು. 


ಕಾರ್ಯಕ್ರಮಕ್ಕೆ ಅಧ್ಯಕ್ಷರಾಗಿ ವಲಯ ಕಛೇರಿಯ ಮಹಾಪ್ರಬಂಧಕರಾದ ಶ್ರೀ ರಾಜೇಶ್ ಖನ್ನಾರವರು ಹಾಗೂ ಉಪಾಧ್ಯಕ್ಷರಾಗಿ ವಲಯ ಕಚೇರಿಯ ಉಪಮಹಾಪ್ರಬಂಧಕ ರಮೇಶ್ ಕನ್ನಾಡೆ ರವರು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಡಾ. ವಸಂತ್ ಕುಮಾರ್ ಪೆರ್ಲರವರು ಹಾಗೂ ಹರೇಕಳ  ಹಾಜಬ್ಬರವರು ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು. ಕವಿ, ಸಾಹಿತಿ ವಿದ್ವಾಂಸರು, ಸಾಹಿತ್ಯ ಸಂಘಟಕರು ಹಾಗೂ ಮಂಗಳೂರು ಆಕಾಶವಾಣಿಯ ನಿರ್ದೇಶಕರಾಗಿ ನಿವೃತ್ತರಾಗಿರುವ ಡಾ. ವಸಂತ್ ಕುಮಾರ್ ಪೆರ್ಲರವರು ಕರ್ನಾಟಕದ ಇತಿಹಾಸವನ್ನು ಚೊಕ್ಕವಾಗಿ ಪ್ರಸ್ತಾಪಿಸಿದರು. ಅವರು ಆಂಗ್ಲ ಭಾಷೆಯನ್ನು ಹೋಲಿಸಿದರೆ ಕನ್ನಡ ಬಳಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ, ಆದ್ದರಿಂದ ಕನ್ನಡವನ್ನು ಹೆಚ್ಚಾಗಿ ಬೆಳೆಸಬೇಕು ಎಂದು ಎಲ್ಲರಿಗೂ ಮನವಿ ಮಾಡಿದರು. 


ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಹರೇಕಳ ಹಾಜಬ್ಬರವರು ಬೆಳೆದುಬಂದ ಮಾರ್ಗ, ಅವರು ಎದುರಿಸಿದ ಸವಾಲಿನ ಬಗ್ಗೆ ಸಭೆಯೊಂದಿಗೆ ಹಂಚಿಕೊಂಡರು. ಅವರು ತಮ್ಮ ಗ್ರಾಮದಲ್ಲಿ ಕಿತ್ತಳೆ ಹಣ್ಣು ಮಾರಾಟದಿಂದ ಬಂದ ಹಣದ ಜೊತೆಗೆ ದಾನದ ಮೂಲಕ ಧನ ಸಂಗ್ರಹಿಸಿ ಸರಕಾರಿ ಶಾಲೆ ಕಟ್ಟಲು 1.22 ಎಕರೆ ಜಮೀನು ನೀಡಿದ್ದಾರೆ. ಅವರ ಈ ಸಾಧನೆಯನ್ನು ಕಂಡು ಕೇಂದ್ರ ಸರಕಾರ 2020ರ ಪದ್ಮಶ್ರೀ ನೀಡಿ ಗೌರವಿಸಿದೆ. ಈ ಸಾಧನೆಯ ಹಿಂದೆ ಹಲವು ರಾಷ್ಟ್ರೀಕೃತ ಬ್ಯಾಂಕ್ಗಳು ಸಹಾಯ ಮಾಡಿವೆ ಎಂದು ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು. 


ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಈ ಸಂದರ್ಭದಲ್ಲಿ ಕರ್ನಾಟಕ ಹಾಗೂ ಕನ್ನಡದ ಮಹತ್ವದ ಬಗ್ಗೆ ಮಾತನಾಡಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ವಸಂತ್ ಕುಮಾರ್ ಪೆರ್ಲ ಹಾಗೂ ಹರೇಕಳ ಹಾಜಬ್ಬರವರಿಗೆ ಸನ್ಮಾನ ಮಾಡಿದರು.


ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆ (CSR) ಅಡಿಯಲ್ಲಿ ಬ್ಯಾಂಕ್ ಆಫ್ ಬರೋಡಾ ಗಣಕಯಂತ್ರ ಗಳನ್ನು (ಕಂಪ್ಯೂಟರ್ ಗಳನ್ನು) ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹೈಸ್ಕೂಲ್, ಹರೇಕಳಕ್ಕೆ ಕಿರು ಕಾಣಿಕೆಯಾಗಿ ಹಾಜಬ್ಬರವರಿಗೆ ನೀಡಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Advt Slider:
To Top