ರಾಜ್ಯೋತ್ಸವ ಪ್ರಶಸ್ತಿಯ ರೂ. 5 ಲಕ್ಷವನ್ನು 5 ಮಾನವೀಯ ಸೇವಾ ಸಂಸ್ಥೆಗಳಿಗೆ ಘೋಷಿಸಿದ ಝಕರಿಯ ಜೋಕಟ್ಟೆ

Chandrashekhara Kulamarva
0


ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂ. 5 ಲಕ್ಷವನ್ನು ಮಾನವೀಯ ಸೇವೆಗೈಯ್ಯುವ 5 ಸಂಸ್ಥೆಗಳಿಗೆ ನೀಡುವುದಾಗಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಉದ್ಯಮಿ ಝಕರಿಯ ಜೋಕಟ್ಟೆ ಘೋಷಿಸಿದ್ದಾರೆ.


ಮಂಗಳೂರಿನ ಸಾನಿಧ್ಯ ಮಾನಸಿಕ ವಿಕಲಚೇತನರ ವಸತಿ ಶಾಲೆ, ಸ್ನೇಹದೀಪ ಎಚ್ಐವಿ ಪೀಡಿತ ಮಕ್ಕಳ ಆಶ್ರಮ ಬೋಂದೆಲ್, ಸ್ನೇಹಾಲಯ ವ್ಯಸನ ವಿಮೋಚನಾ ಕೇಂದ್ರ ತಲಪಾಡಿ, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಲೇಡಿಗೋಶನ್ ಕಾರುಣ್ಯ ಯೋಜನೆ, ಕಾವಳಕಟ್ಟೆ ಹಿದಾಯ ಕಾಲನಿಯ ವಿಕಲಚೇತನ ಮಕ್ಕಳ ಕೇಂದ್ರಕ್ಕೆ ತಲಾ ರೂ. ಒಂದು ಲಕ್ಷ ನೀಡುವುದಾಗಿ ತಿಳಿಸಿದ್ದಾರೆ. ಝಕರಿಯ ಜೋಕಟ್ಟೆ ಅಭಿಮಾನಿ ಬಳಗ ನವಂಬರ್ ತಿಂಗಳಲ್ಲಿ ಏರ್ಪಡಿಸಲುದ್ದೇಶಿಸಿರುವ ಪೌರ ಸನ್ಮಾನದಲ್ಲಿ ಈ ಮೊತ್ತವನ್ನು ವಿತರಿಸಲಿದ್ದಾರೆ.


ಕರ್ನಾಟಕ ಸರಕಾರವು ರಾಜ್ಯೋತ್ಸವದಂದು ಅನಿವಾಸಿ ಉದ್ಯಮಿ, ಕೊಡುಗೈ ದಾನಿ, ಎಂ.ಫ್ರೆಂಡ್ಸ್ ಚಾರಿಟೇಬಲ್ ಅಧ್ಯಕ್ಷ ಝಕರಿಯ ಜೋಕಟ್ಟೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಝೀರ್ ಅಹ್ಮದ್ ಸೇರಿಕೊಂಡು ಗೌರವಿಸಿದರು. ಪ್ರಶಸ್ತಿಯು ರೂ. 5 ಲಕ್ಷ ನಗದು, 25 ಗ್ರಾಮ್ ಚಿನ್ನದ ಪದಕ, ಪ್ರಶಸ್ತಿ ಪತ್ರ, ಸ್ಮರಣಿಕೆ ಒಳಗೊಂಡಿತ್ತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top