ಕಾಂತಾವರ ಕನ್ನಡ ಸಂಘದ ನಾಲ್ಕು ದತ್ತಿನಿಧಿ ಪ್ರಶಸ್ತಿಗಳ ಘೋಷಣೆ

Upayuktha
0


ಮಂಗಳೂರು: ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ 2025ರ ಸಾಲಿನ ನಾಲ್ಕು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.


ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಳ್ಳಾರಿಯ ಲೋಹಿಯಾ ಪ್ರಕಾಶನದ  ಚೆನ್ನಬಸವಣ್ಣ ಅವರಿಗೆ ನೀಡಲಾಗುತ್ತಿದೆ.


ಧಾರವಾಡದ ಹಿರಿಯ ಸಾಹಿತಿ ಡಾ.ಜಿ.ಎಂ. ಹೆಗಡೆ ಅವರ ದತ್ತಿನಿಧಿಯ ‘ಪ್ರಾಧ್ಯಾಪಕ ಸಂಶೋಧಕ ಪ್ರಶಸ್ತಿ’ಯನ್ನು ಹಿರಿಯ ವಿದ್ವಾಂಸರೂ, ನಿವೃತ್ತ ಪ್ರಾಧ್ಯಾಪಕರೂ  ಆಗಿರುವ ಬೆಂಗಳೂರಿನ ಡಾ. ಆರ್. ಲಕ್ಷ್ಮೀನಾರಾಯಣ ಅವರಿಗೆ ಸಂಘದ ವಾರ್ಷಿಕ  ‘ಶ್ರೇಷ್ಠ ಪತ್ರಕರ್ತ’ ಪ್ರಶಸ್ತಿಯನ್ನು ಪತ್ರ್ರಕರ್ತ ಮತ್ತು ಸಾಹಿತಿಯಾಗಿರುವ ಲಕ್ಷ್ಮಣ ಕೊಡಸೆ ಅವರಿಗೆ ಪ್ರದಾನ ಮಾಡಲಾಗುತ್ತಿದೆ.


ರಾಷ್ಟ್ರಪ್ರಶಸ್ತಿ ಪುರಸ್ಕೃತ ದಿ. ಬಾಲಕೃಷ್ಣ ಆಚಾರ್ ದಂಪತಿಗಳ ದತ್ತಿನಿಧಿಯ ‘ಶ್ರೇಷ್ಠ ಶಿಕ್ಷಕ ಸೌರಭ’ ಪ್ರಶಸ್ತಿಯನ್ನು ರಾಷ್ಟ್ರ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾದ ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ಅವರಿಗೆ ನೀಡಲಾಗುವುದೆಂದು ನಿರ್ಣಯಿಸಲಾಗಿದೆ. 


ಪ್ರಶಸ್ತಿಯು ತಲಾ 10,000 ರೂಪಾಯಿಗಳ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನಗಳನ್ನು ಒಳಗೊಂಡಿದ್ದು ಇದೇ ಡಿಸೆಂಬರ್ 28ರಂದು ನಡೆಯುವ ‘ಸಂಘದ ಐವತ್ತರ ಸಂಭ್ರಮದ ದ್ವಿತೀಯ ಕಾರ್ಯಕ್ರಮ’ದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಪ್ರದಾನಿಸ ಲಾಗುವುದೆಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top