ರೇಡಿಯೋ ಮಣಿಪಾಲ್‌ನಿಂದ ವೃತ್ತಿ ಚಿಂತನ – ಶಿಕ್ಷಣ ಮಾರ್ಗದರ್ಶನ” ಸರಣಿ

Upayuktha
0


ಪರ್ಕಳ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಂಸ್ಥೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್–ಮಣಿಪಾಲ ಕ್ಯಾಂಪಸ್‌ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರವು ಸಮುದಾಯದ ಧ್ವನಿಯಾಗಿ ಶಿಕ್ಷಣ, ಅರಿವು ಮತ್ತು ಸಾಮಾಜಿಕ ಜಾಗೃತಿಗಾಗಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಇದೀಗ ಮತ್ತೊಂದು ವಿನೂತನ ಹೆಜ್ಜೆಯಾಗಿ ವೃತ್ತಿ ಮಾರ್ಗದರ್ಶನ ಸರಣಿ ಕಾರ್ಯಕ್ರಮವನ್ನು ಆರಂಭಿಸಿದೆ.


ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಮೂಲಕ ಪ್ರಸಾರಗೊಳ್ಳಲಿರುವ “ವೃತ್ತಿ ಚಿಂತನ – ಶಿಕ್ಷಣ ಮಾರ್ಗದರ್ಶನ” ಸರಣಿ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ಪರ್ಕಳ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆಯಿತು. ಈ ಸರಣಿ ಕಾರ್ಯಕ್ರಮವು ವಾರಕ್ಕೆ ಒಂದು ಬಾರಿ ಪ್ರಸಾರವಾಗಲಿದ್ದು, ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಸಾಮಾನ್ಯ ಜನತೆಗೆ ವೃತ್ತಿ ಆಯ್ಕೆ ಕುರಿತ ಸರಿಯಾದ ಮಾಹಿತಿ, ಸ್ಪಷ್ಟತೆ ಮತ್ತು ಪ್ರೇರಣೆಯನ್ನು ನೀಡುವ ಉದ್ದೇಶ ಹೊಂದಿದೆ.


ಈ ಕಾರ್ಯಕ್ರಮಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ; ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ; ಉಡುಪಿ ಜಿಲ್ಲಾ ಮುಖ್ಯೋಪಾಧ್ಯಾಯರ ಸಂಘ; ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ; ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಹಾಗೂ ಶೆಫಿನ್ಸ್ ಉಡುಪಿ ಸಹಯೋಗ ನೀಡಿವೆ.


“ವೃತ್ತಿ ಚಿಂತನ – ಶಿಕ್ಷಣ ಮಾರ್ಗದರ್ಶನ” ಸರಣಿಯ ಸಂಪನ್ಮೂಲ ವ್ಯಕ್ತಿಯಾಗಿ ವೃತ್ತಿ ಮಾರ್ಗದರ್ಶನ ಕ್ಷೇತ್ರದಲ್ಲಿ ಎರಡು ದಶಕಗಳಿಗೂ ಅಧಿಕ ಅನುಭವ ಹೊಂದಿರುವ, ಡಯಟ್ ಉಡುಪಿ ಸಂಸ್ಥೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರಿಗೆ ತರಬೇತಿ ನೀಡಿರುವ ಹಾಗೂ ಸಾವಿರಾರು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಿರುವ ತಜ್ಞ ಮನೋಜ್ ಕಡಬಾ ಅವರು ಮಾಹಿತಿ ನೀಡಲಿದ್ದಾರೆ.


ಈ ಮೂಲಕ ವೃತ್ತಿ ಮಾರ್ಗದರ್ಶನವು ವೇದಿಕೆಗಳಿಗೆ ಮಾತ್ರ ಸೀಮಿತವಾಗದೆ, ರೇಡಿಯೋ ಮೂಲಕ ಜನಸಾಮಾನ್ಯರ ಮನೆಬಾಗಿಲಿಗೆ ತಲುಪಲಿದೆ. ಸಮುದಾಯ ಬಾನುಲಿಯ ಪರಿಕಲ್ಪನೆಯಂತೆ ಇದು ಸಮುದಾಯದಿಂದ ಸಮುದಾಯಕ್ಕೆ ಸಮರ್ಪಿಸಲ್ಪಟ್ಟ ಕಾರ್ಯಕ್ರಮವಾಗಿದೆ.


ಡಯಟ್ ಉಡುಪಿ ಪ್ರಾಂಶುಪಾಲರಾದ ಡಾ. ಅಶೋಕ್ ಕಾಮತ್ ಹಾಗೂ ಉಡುಪಿ ಜಿಲ್ಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಕಿರಣ್ ಹೆಗ್ಡೆ ಅವರು ಕಾರ್ಯಕ್ರಮದ ಬ್ಯಾನರ್ ಬಿಡುಗಡೆ ಮಾಡುವ ಮೂಲಕ ಸರಣಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ರೋಟರಿ ಪರ್ಕಳ ಕಾರ್ಯದರ್ಶಿ ವಿಶ್ವನಾಥ ನಾಯಕ್, ಜೆ.ಸಿ.ಐ ವಲಯಾಧ್ಯಕ್ಷ ರಾಜೇಂದ್ರ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಲ್ಲಮ್ಮ, ನಾಗೇಶ್ ಹಾಗೂ ಉಮಾ, ಪರ್ಕಳ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಆನಂದ ನಾಯಕ್, ರೇಡಿಯೋ ಮಣಿಪಾಲ್‌ನ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರಾದ ಡಾ. ರಶ್ಮಿ ಅಮ್ಮೆಂಬಳ ಹಾಗೂ ಸಂಪನ್ಮೂಲ ವ್ಯಕ್ತಿ ಮನೋಜ್ ಕಡಬಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶೆಬಾ ಮನೋಜ್ ಅವರು ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top