ಇಂದಿನಿಂದ ಕನ್ನಡೇತರಿಗೆ ಕನ್ನಡ ಕಲಿಕಾ ತರಬೇತಿ

Chandrashekhara Kulamarva
0


ಉಡುಪಿ: ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಡಾ.ಶಿವರಾಮ ಕಾರಂತಟ್ರಸ್ಟ್‍ ಉಡುಪಿ ಜಿಲ್ಲೆಇವರ ವತಿಯಿಂದ ಉಡುಪಿ ಕೊಚ್ಚಿನ್ ಶಿಪ್‍ಯಾರ್ಡ್ ಲಿಮಿಟೆಡ್‍ ಇವರ  ಸಹಯೋಗದಲ್ಲಿ ನಡೆಯುವ “ಕನ್ನಡೇತರಿಗೆಕನ್ನಡ ಕಲಿಕಾ ತರಬೇತಿಯ” ಉದ್ಘಾಟನಾ ಸಮಾರಂಭವು ಡಿಸೆಂಬರ್ 10 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ಕೊಚ್ಚಿನ್ ಶಿಪ್‍ಯಾರ್ಡ್ ಲಿಮಿಟೆಡ್‍ನ, ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್  ವಿ ನಾಯಕ ಉದ್ಘಾಟಿಸಲಿದ್ದು, ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ. 


ಮುಖ್ಯ ಅತಿಥಿಗಳಾಗಿ ಜಿಲ್ಲಾಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಉಡುಪಿ ಕೊಚ್ಚಿನ್ ಶಿಪ್‍ಯಾರ್ಡ್ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕಅಧಿಕಾರಿ ಹರಿಕುಮಾರ್ ಎ, ಮುಖ್ಯ ಹಣಕಾಸು ಅಧಿಕಾರಿ ಶಂಕರ್ ನಟರಾಜ್, ಉಪಪ್ರಧಾನ ವ್ಯವಸ್ಥಾಪಕ ಎಂ ಅಂಬಲವನನ್ ಭಾಗವಹಿಸಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ. 


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top