ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆ

Upayuktha
0



ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರ ವಿಭಾಗ, ಪ್ರಾಣಿಶಾಸ್ತ್ರ ವಿಭಾಗ ಹಾಗೂ ಪರಿಸರ ಸಂಘ ಸಂಯುಕ್ತವಾಗಿ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆಯ ಕಾರ್ಯಕ್ರಮವನ್ನು ಸ್ಪಂದನ ಸಭಾಂಗಣದಲ್ಲಿ ಆಯೋಜಿಸಿತು.

 

ಕಾಲೇಜಿನ ಗೌರವಾನ್ವಿತ ಪ್ರಾಂಶುಪಾಲರಾದ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊರವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾತನಾಡಿದರು. ರಾಷ್ಟ್ರವು ಎದುರಿಸುತ್ತಿರುವ ಹೊಸ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ನಿರ್ಮಲ ಮತ್ತು ಹೊಣೆಗಾರಿಕೆಯ ಮನೋಭಾವವನ್ನು ಬೆಳೆಸಿಕೊಳ್ಳುವ ಅಗತ್ಯವನ್ನು ಅವರು ಹೇಳಿದರು.


ಮುಖ್ಯ ಅತಿಥಿ ಐಕ್ಯೂಎಸಿ ಸಂಯೋಜಕ ಡಾ. ಎಡ್ವಿನ್ ಡಿಸೋಜಾ ಅವರು ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನವನ್ನು ಆಚರಿಸುವ ಮಹತ್ವದ ಬಗ್ಗೆ ವಿವರವಾದ ಹಾಗೂ ಮಾಹಿತಿಪೂರ್ಣ ಉಪನ್ಯಾಸ ನೀಡಿದರು. ಭೋಪಾಲ್ ಅನಿಲ ದುರಂತವನ್ನು ಸ್ಮರಿಸುವುದರ ಜೊತೆಗೆ ಕಠಿಣ ಮಾಲಿನ್ಯ ನಿಯಂತ್ರಣ ಕ್ರಮಗಳ ತುರ್ತು ಅಗತ್ಯವನ್ನು ಅವರು ತಿಳಿಸಿ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂದು  ಕರೆ ನೀಡಿದರು.


ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಶಶಿಪ್ರಭಾ ಬಿ ಹಾಗೂ ಶ್ರೀಮತಿ ಸ್ಮಿತಾ ವಿವೇಕ್ ಕಾರ್ಯಕ್ರಮ ಸಂಯೋಜಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top