ಪರಮವೀರ ಚಕ್ರ ಪುರಸ್ಕೃತ ಲೆ. ಸಂಜಯ್ ಕುಮಾರ್ ಕಾರ್ಯಕ್ರಮಕ್ಕೆ ಸಹಕರಿಸಿದವರಿಗೆ ಕೃತಜ್ಞತೆ

Upayuktha
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವದ ಅಂಗವಾಗಿ ಪುತ್ತೂರಿಗೆ ಆಗಮಿಸಿದ್ದ ಕಾರ್ಗಿಲ್ ಯೋಧ, ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆಫ್ಟಿನೆಂಟ್ ಸಂಜಯ್ ಕುಮಾರ್ ಅವರನ್ನು ಐತಿಹಾಸಿಕ ರೀತಿಯಲ್ಲಿ ಬರಮಾಡಿಕೊಂಡದ್ದಕ್ಕಾಗಿ ಇಡಿಯ ಪುತ್ತೂರಿನ ಜನತೆಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹಾಗೂ ಪುತ್ತೂರಿನ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸಾರ್ಜೆಂಟ್ ವಸಂತ ಕುಮಾರ್ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.


ಪುತ್ತೂರಿನ ವರ್ತಕರು, ನಾನಾ ಸಂಘ - ಸಂಸ್ಥೆಗಳು, ಪಕ್ಷಬೇಧವಿಲ್ಲದೆ ರಾಜಕೀಯ ನೇತಾರರು, ಸಾಮಾಜಿಕ ಧುರೀಣರು, ಶಿಕ್ಷಣ ಕ್ಷೇತ್ರದ ಹಿರಿಯರು, ಸಾರ್ವಜನಿಕರು, ಮಾಜಿ ಸೈನಿಕರು ಲೆ.ಸಂಜಯ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಿದ್ದಾರೆ. ಪುತ್ತೂರಿನ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತೆ ಅತ್ಯಪೂರ್ವ ಮೆರವಣಿಗೆಯಲ್ಲಿ ತಾವು ಭಾಗಿಯಾದ್ದಾರೆ. ಮಾಧ್ಯಮ ಮಿತ್ರರು ಅತ್ಯುತ್ತಮ ಪ್ರಚಾರ ಕಾರ್ಯವನ್ನು ನಡೆಸಿ ಸಹಕಾರ ನೀಡಿದ್ದಾರೆ. ನಾನಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಹಿರಿಯರು, ಬೋಧಕ - ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದ್ದಾರೆ. ಎಲ್ಲರ ಸರ್ವವಿಧದ ಬೆಂಬಲದಿಂದಾಗಿ ಕಾರ್ಯಕ್ರಮ ಅಭೂತಪೂರ್ವ ಯಶಸ್ಸನ್ನು ದಾಖಲಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top