ಧರ್ಮಸ್ಥಳ: ವಿಶ್ವ ವನಿತಾ ಕಬಡ್ಡಿಯಲ್ಲಿ ಚಾಂಪಿಯನ್ ಶಿಪ್ ಪಡೆದ ಭಾರತ ತಂಡವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಕೀರ್ತಿ ತಂದ ಧನಲಕ್ಷ್ಮೀ ಪೂಜಾರಿ ಇಡ್ಯಾ ಅವರು ಭಾನುವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಪೂಜ್ಯರು ಧನಲಕ್ಷ್ಮೀ ಪೂಜಾರಿ ಅವರನ್ನು ಗೌರವಿಸಿ ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹರಸಿದರು. ಧನಲಕ್ಷ್ಮೀ ಅವರ ತಂದೆ ನಾರಾಯಣ ಪೂಜಾರಿ, ತಾಯಿ ಶಶಿಕಲಾ, ಕೋಚ್ ಹಂಸವತಿ ಸಿ.ಎಚ್. ಹಾಗೂ ಕುಟುಂಬದ ಸದಸ್ಯರು ಜತೆಗಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


