ಪುತ್ತೂರು: ಆಧುನಿಕತೆಯ ಭರಾಟೆಯಲ್ಲಿ ಇಂದಿನ ಯುವಜನತೆ ತಮ್ಮತನವನ್ನು ಕಳೆದುಕೊಳ್ಳುತ್ತಿದ್ದಾರೆಯೋ ಎನ್ನುವ ಭೀತಿ ಕಾಡುತ್ತಿದೆ. ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯಿಂದ ಗುರುಹಿರಿಯರಲ್ಲಿ ಭಕ್ತಿ ಗೌರವಗಳು ಕಡಿಮೆಯಾಗುತ್ತಿದ್ದು, ಸ್ವೇಚ್ಚಾಚಾರಗಳು ಹೆಚ್ಚುತ್ತಿದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ಮಾಡಿ ಮಾತಾಡಿದರು. ಪ್ರಜೆಗಳಿಗೆ ಸಮಾನ ಅಧಿಕಾರವನ್ನು ನೀಡುವ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯು ವಿಶ್ವದಲ್ಲಿಯೇ ಅತಿ ಶ್ರೇಷ್ಟವಾದದ್ದು ಆದರೆ ದೇಶದ ರಾಜಕೀಯ ಮೇಲಾಟಗಳಿಂದ ಈ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಉಂಟಾಗಿದ್ದು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ನಾವು ಹೆಣಗಾಡಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದರು. ದೇಶದ ಅಖಂಡತೆ ಮತ್ತು ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಯುವಜನತೆ ಕಟಿಬದ್ದರಾಗಬೇಕು ಎಂದು ಹೇಳಿದರು.
ಕಾಲೇಜಿನ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ಆಶ್ಲೆ.ಡಿ’ಸೋಜ ದೇಶದ ಸಂವಿಧಾನದ ಆಶಯಗಳು ಮತ್ತು ಅದನ್ನು ಅನುಸರಿಸಬೇಕಾದ ಅಗತ್ಯತೆಗಳ ಬಗ್ಗೆ ಮಾಹಿತಿ ನೀಡಿದರು.
ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಮತ್ತು ಕಾರ್ಯಕ್ರಮ ಸಂಯೋಜಕ ಬಾಲಚಂದ್ರ ಗೌಡ ಭಾರ್ತಿಕುಮೇರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದರು.
ವಿದ್ಯಾರ್ಥಿನಿಯರಾದ ದೀಪಶ್ರೀ, ಸನ್ಮಯ, ಅನೂಶಾ, ಆಕಾಂಕ್ಷಾ ಮತ್ತು ಶ್ರೀಮಾ ಪ್ರಾರ್ಥಿಸಿದರು. ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ವಂದಿಸಿದರು. ಪ್ರಯೋಗಾಲಯ ಮೇಲ್ವಿಚಾರಕ ಹರಿಪ್ರಸಾದ್.ಡಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


