ಉಜಿರೆ: ಬೆಳ್ತಂಗಡಿ ತಾಲೂಕಿನ ಸಮಸ್ತ ನಾಗರಿಕರಿಂದ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ಉಡುಪಿಯ ಭಾವೀ ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪೌರಸನ್ಮಾನ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಜಿಲ್ಲಾಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ ಅವರು ಫಲಪುಷ್ಪ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಡಾ. ಉದಯ ಕುಮಾರ ಸರಳತ್ತಾಯ, ಎಸ್ಡಿಎಂ ಸ್ವಾಯತ್ತ ಕಾಲೇಜಿನ ಆಡಳಿತಾಂಗ ಕುಲಸಚಿವ ಡಾ.ಶ್ರೀಧರ ಭಟ್, ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ. ಶರತ್ ಕುಮಾರ್, ಕಾಂಚನ ಎಸ್ಡಿಎಂ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ್ ಮಯ್ಯ, ಗಮಕಿ ರಾಮಕೃಷ್ಣ ಭಟ್ ಬಳಂಜ, ಎಸ್ ಡಿ ಎಂ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


