ಗರ್ಭಾಶಯದ ಆಸಹಜ ರಕ್ತಸ್ರಾವ ಕುರಿತು ಉಚಿತ ಆಯುರ್ವೇದ ಸಮಾಲೋಚನೆ ಮತ್ತು ಚಿಕಿತ್ಸಾ ಶಿಬಿರ

Upayuktha
0


ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಉಡುಪಿ ಇವರ ವತಿಯಿಂದ ಗರ್ಭಾಶಯದ ಆಸಹಜ ರಕ್ತಸ್ರಾವ (Abnormal Uterine Bleeding– AUB) ಸಮಸ್ಯೆಯಿಂದ ಬಳಲುತ್ತಿರುವ ಮಹಿಳೆಯರಿಗಾಗಿ ಉಚಿತ ಆಯುರ್ವೇದ ಸಮಾಲೋಚನೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.


ಗರ್ಭಾಶಯದ ಆಸಹಜ ರಕ್ತಸ್ರಾವ (AUB) ಎಂದರೆ, ಋತುಚಕ್ರದ ನಿಯಮಿತ ಸಮಯದಲ್ಲಿ ಅಥವಾ ಎರಡು ಋತುಚಕ್ರಗಳ ಮಧ್ಯದಲ್ಲಿ ಗರ್ಭಾಶಯದಿಂದ ಅಧಿಕ ಪ್ರಮಾಣದ ಹಾಗೂ ದೀರ್ಘಕಾಲದ ರಕ್ತಸ್ರಾವವಾಗುವುದು. ಈ ಸಮಸ್ಯೆ ಮಹಿಳೆಯರ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಒತ್ತಡಕ್ಕೂ ಕಾರಣವಾಗುತ್ತದೆ.


ಎಯುಬಿ ಸಮಸ್ಯೆಯ ಸಾಮಾನ್ಯ ಲಕ್ಷಣಗಳು:


1.ಋತುಚಕ್ರದ ಸಮಯದಲ್ಲಿ ಅಧಿಕ ಪ್ರಮಾಣದ ರಕ್ತಸ್ರಾವ


2. ಸಾಮಾನ್ಯಕ್ಕಿಂತ ಹೆಚ್ಚು ದಿನಗಳವರೆಗೆ ನಡೆಯುವ ಅಥವಾ ತೀವ್ರ ಹೊಟ್ಟೆನೋವಿನಿಂದ ಕೂಡಿದ ಋತುಸ್ರಾವ


3.ಋತುಚಕ್ರದ ಮಧ್ಯದಲ್ಲೇ ಅನಿಯಮಿತ ರಕ್ತಸ್ರಾವ


4.ಅಧಿಕ ರಕ್ತಸ್ರಾವದಿಂದ ಉಂಟಾಗುವ ರಕ್ತಹೀನತೆ, ದೌರ್ಬಲ್ಯ ಮತ್ತು ದಣಿವು



ಈ ರೀತಿಯ ಲಕ್ಷಣಗಳನ್ನು ಅನುಭವಿಸುತ್ತಿರುವ ಮಹಿಳೆಯರು ತಜ್ಞರ ಸಲಹೆ ಪಡೆಯುವುದು ಅತ್ಯಂತ ಅಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.


ಶಿಬಿರದ ಪ್ರಮುಖ ಪ್ರಯೋಜನಗಳು:

1. ಅನುಭವಸಂಪನ್ನ ಸ್ತ್ರೀರೋಗ ತಜ್ಞರಿಂದ ಉಚಿತ ಆಯುರ್ವೇದ ಸಮಾಲೋಚನೆ


2. ಅರ್ಹ ಮಹಿಳೆಯರಿಗೆ ಉಚಿತ ರಕ್ತ ಪರೀಕ್ಷೆ ಮತ್ತು ಸ್ಕ್ಯಾನಿಂಗ್ ಸೌಲಭ್ಯ


3. ಆಯ್ಕೆಯಾದ ಮಹಿಳೆಯರಿಗೆ 4 ತಿಂಗಳುಗಳ ಕಾಲ ಉಚಿತ ಆಯುರ್ವೇದ ಔಷಧ ವಿತರಣೆ


ಶಿಬಿರದ ವಿವರಗಳು:


ಅರ್ಹ ವಯಸ್ಸು: 18 ರಿಂದ 40 ವರ್ಷಗಳು

ಸಮಯ: ಬೆಳಿಗ್ಗೆ 10.00 ರಿಂದ ಸಂಜೆ 4.00 (ಸೋಮವಾರದಿಂದ ಶನಿವಾರದವರೆಗೆ)

ಸ್ಥಳ: ಪ್ರಸೂತಿತಂತ್ರ ಮತ್ತು ಸ್ತ್ರೀರೋಗ ಹೊರರೋಗಿ ವಿಭಾಗ ಸಂಖ್ಯೆ–1,

ಎಸ್.ಡಿ.ಎಮ್. ಆಯುರ್ವೇದ ಆಸ್ಪತ್ರೆ, ಉಡುಪಿ


ಆರೋಗ್ಯದ ಬಗ್ಗೆ ಮೌನ ವಹಿಸುವ ಬದಲು ಸಮಯೋಚಿತ ಚಿಕಿತ್ಸೆ ಪಡೆಯಬೇಕು ಎಂಬ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ. ಆಸಕ್ತ ಮಹಿಳೆಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top