ಮಂಗಳೂರು: ಮ.ನ.ಪಾ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡಿನ ನಂತೂರು ಕೊರಗಜ್ಜ ಗುಡಿಯ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಭವನದ ಸಭಾಂಗಣದ ಉದ್ಘಾಟನಾ ಕಾರ್ಯಕ್ರಮವು ಶಾಸಕ ವೇದವ್ಯಾಸ್ ಕಾಮತ್ರವರ ಉಪಸ್ಥಿತಿಯಲ್ಲಿ ನಡೆಯಿತು.
ನಂತರ ಮಾತನಾಡಿದ ಶಾಸಕರು, ಈ ಪ್ರದೇಶಕ್ಕೊಂದು ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣವಾಗಬೇಕೆಂದು ಇಲ್ಲಿನ ನಿಕಟ ಪೂರ್ವ ಪಾಲಿಕೆ ಸದಸ್ಯೆ ಶ್ರೀಮತಿ ಶಕೀಲಾ ಕಾವ ರವರು ಹಲವು ಬಾರಿ ನನ್ನಲ್ಲಿ ಮನವಿ ಮಾಡಿದ್ದರು. ಅದರಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 25 ಲಕ್ಷ ಅನುದಾನವನ್ನು ಹೊಂದಿಸಿಕೊಂಡು ಶೀಘ್ರವಾಗಿ ಕಾಮಗಾರಿ ಮುಗಿಸಲಾಗಿತ್ತು. ಇದೀಗ ಅದರ ಉದ್ಘಾಟನೆಗೊಳ್ಳುತ್ತಿದ್ದು ಈ ಭಾಗದ ಎಲ್ಲರಿಗೂ ಉಪಯೋಗವಾಗಲೆಂದು ಹಾರೈಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಕಮಲಾಕ್ಷಿ, ಗಂಗಾಧರ ಕದ್ರಿ, ನೈನಾ ವಿಶ್ವನಾಥ್, ಚಂದ್ರಶೇಖರ ಬಜಾಲ್, ರವಿಚಂದ್ರ, ವೆಂಕಟೇಶ್, ದೃತೇಶ್ ಗುಂಡಳಿಕೆ, ವಿಜಯ ಶೆಣೈ, ರಮೇಶ್ ಮುಂಡಾಣ, ಚಂದ್ರಕಾಂತ್, ಶಿವಪ್ಪ ನಂತೂರು, ಸಂತೋಷ್ ನಂತೂರು, ಚೇತನ ನರೇಂದ್ರ, ಉಮಾ ಕಂಡೆಟ್ಟು, ಉಮಾ ಶೆಟ್ಟಿ, ಉಷಾ ಶೆಟ್ಟಿ, ಚಿನ್ನಪ್ಪ, ವಿಠಲ ಗುಂಡಳಿಕೆ, ಶಿವಾನಂದ, ಚಂದ್ರಕಾಂತ್, ಯಮುನಪ್ಪ, ಅಖಿಲೇಶ್, ಯಶವಂತಿ, ರೋಹಿತ್, ಮತ್ತು ಕೊರಗಜ್ಜನ ಗುಡಿಯ ನವೀನ್, ಗಂಗಾಧರ್, ದಯಾನಂದ ಸೇರಿದಂತೆ ವಾರ್ಡಿನ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


