ಸುಳ್ಯ ಶಾಸಕಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

Upayuktha
0


ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ.


ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, "ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ ಬಂದು ಅತ್ಯಂತ ಸಜ್ಜನಿಕೆಯಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಬ್ಬ ಜನಪ್ರತಿನಿಧಿಯ ಬಗ್ಗೆ, ಅದರಲ್ಲೂ ಮಹಿಳಾ ಶಾಸಕಿಯ ವಿರುದ್ಧ ಈ ರೀತಿಯಲ್ಲಿ ಕೀಳುಮಟ್ಟದ ಪೋಸ್ಟ್ ಹಾಕಿರುವುದು ಅತ್ಯಂತ ಖಂಡನೀಯ. ವಿವೇಚನೆ ಇಲ್ಲದ ಅಭಿವ್ಯಕ್ತಿ ಮತ್ತು ಸಂಸ್ಕಾರವಿಲ್ಲದ ಟೀಕೆಗಳನ್ನು ನಾಗರಿಕ ಸಮಾಜ ಎಂದಿಗೂ ಒಪ್ಪಲು ಸಾಧ್ಯವಿಲ್ಲ; ಅವು ವಿಕೃತ ಮನಸ್ಸಿನ ಕೆಟ್ಟ ಆಲೋಚನೆಗಳ ಅತಿರೇಕರ ವರ್ತನೆಯಾಗಿದೆ. ಜಾಲತಾಣದಲ್ಲಿ ಜನಪ್ರತಿನಿಧಿಗಳನ್ನು ಈ ರೀತಿ ತೇಜೋವಧೆ ಮಾಡಿರುವುದು ಅತ್ಯಂತ ಗಂಭೀರ ವಿಚಾರ" ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.


ಸಮಾಜದ ಸ್ವಾಸ್ಥ್ಯ ಕೆಡಿಸುವ ಇಂತಹ ಪೋಸ್ಟ್‌ಗಳು ಕೇವಲ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತವೆ. ಸಾಮಾಜಿಕ ಜಾಲತಾಣಗಳನ್ನು ಸದುಪಯೋಗಪಡಿಸಿಕೊಳ್ಳುವ ಬದಲು, ವ್ಯಕ್ತಿತ್ವ ಹರಣಕ್ಕೆ ಬಳಸುತ್ತಿರುವುದು ಅತ್ಯಂತ ವಿಷಾದನೀಯ ಎಂದು ಕ್ಯಾ. ಚೌಟ ಅವರು ಹೇಳಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top