ಉಡುಪಿ: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪರ್ಯಾಯ ಪೀಠವೇರುವ ಮುನ್ನ ತನ್ನ ಪೂರ್ವಾಶ್ರಮದ ಮನೆಗೆ ಭೇಟಿ ನೀಡಿ ಸಂಸ್ಥಾನ ಪೂಜೆ ಮತ್ತು ಮನೆ ದೇವರಿಗೆ ಪೂಜೆ ಸಲ್ಲಿಸಿದರು.
ಉಡುಪಿಯ ಅಲೆವೂರಿನಲ್ಲಿರುವ ಮನೆಗೆ ಆಗಮಿಸಿದ ಶ್ರೀಗಳನ್ನು ಮನೆಯವರು ಹಾಗೂ ಬಂಧುಗಳು ಆದರದಿಂದ ಬರಮಾಡಿಕೊಂಡು ಗೌರವಿಸಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ಡಾ ಉದಯಕುಮಾರ ಸರಳತ್ತಾಯ ದಂಪತಿಗಳು ಹಾಗೂ ಶ್ರೀಗಳ ಪೂರ್ವಾಶ್ರಮದ ಮನೆಯ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

