ಉಡುಪಿ: ಶೀರೂರು ಪರ್ಯಾಯದ ಅಂಗವಾಗಿ ವಿಶೇಷ ದೀಪಾಲಂಕಾರದ ಉದ್ಘಾಟನೆ ನಡೆಯಲಿದೆ ನಗರದ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ನ ಮುಂಭಾಗ ಲಯನ್ಸ್ ವೃತ್ತದ ಬಳಿ ಇಂದು (ಜ.15) ಸಂಜೆ 6.00 ಗಂಟೆಗೆ ನಡೆಯಲಿದೆ. ಉಡುಪಿ ನಗರ ಎಲ್ಲೆಡೆ ಆಕರ್ಷಕ ದ್ವಾರಗಳಿಂದ ಸ್ವಾಗತ ಕಮಾನುಗಳಿಂದ ಕಂಗೊಳಿಸುತ್ತಿದೆ. ಇದಕ್ಕೆ ಹೆಚ್ಚಿನ ಮೆರುಗು ನೀಡಲು ಉಡುಪಿ ನಗರವನ್ನು ಆಕರ್ಷಕ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಯಶ್ ಪಾಲ್ ಸುವರ್ಣ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಸ್ವಾಗತ ಸಮಿತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


