ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ. ಶ್ರೀಕೃಷ್ಣ ಗಣರಾಜ ಭಟ್

Upayuktha
0

ಭಾಷಾ ಕೌಶಲ್ಯಗಳ ಐದು ದಿನಗಳ ಕಾರ್ಯಗಾರ ಉದ್ಘಾಟನೆ



ಪುತ್ತೂರು: ಮನುಷ್ಯನ ಆಲೋಚನೆಗಳನ್ನು ಇತರರಿಗೆ ಅರ್ಥೈಸುವುದಕ್ಕೆ ಸಂವಹನ ಹಾಗೂ ಭಾಷೆ ಅಗತ್ಯವಾಗಿದೆ. ಉತ್ತಮ ಯೋಜನೆಗಳನ್ನು ಹೇಗೆ ತಿಳಿಸುತ್ತೇವೆ ಅನ್ನುವುದರ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ವೃತ್ತಿಜೀವನದ ಯಶಸ್ಸಿಗೆ ಸಂವಹನವೇ ಮೂಲ ಎಂದು ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಹೇಳಿದರು.


ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ, ಪದವಿ ಇಂಗ್ಲಿಷ್ ವಿಭಾಗ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ನಡೆಯಲಿರುವ 5 ದಿನಗಳ ಸಾಮಥ್ರ್ಯ ವರ್ಧನೆ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. 


ಭಾಷಾ ಬಳಕೆಯಿಂದ ಸಂವಹನದ ಗುಣಮಟ್ಟ ಹೆಚ್ಚಳವಾಗುತ್ತದೆ. ವ್ಯಾಕರಣದ ಬಳಕೆ, ಪದಗಳ ಜ್ಞಾನ ಸಂವಹನಕಾರನಿಗೆ ಗರಿಮೆ ನೀಡುತ್ತದೆ. ಮಾತ್ರವಲ್ಲದೆ ಉದ್ಯೋಗ ಕ್ಷೇತ್ರದಲ್ಲಿ ಸಂವಹನವೇ ಧೈರ್ಯತುಂಬುತ್ತದೆ ಎಂದರು.


ಕಲಾ ವಿಭಾಗದಡೀನ್, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಬಾಲಕೃಷ್ಣಎಚ್. ಮಾತನಾಡಿ, ಕಾಲೇಜುಗಳಲ್ಲಿ ನಡೆಯುವ ಕಾರ್ಯಗಾರಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ನಿಷ್ಠರಾಗಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿದಲ್ಲಿ, ಉನ್ನತ ವ್ಯಕ್ತಿತ್ವವನ್ನು ರೂಪಿಸಬಹುದು ಎಂದರು. 


ಕಾರ್ಯಕ್ರಮದಲ್ಲಿ ದ್ವಿತೀಯ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿರಜತ್ ಸ್ವಾಗತಿಸಿ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ. ವಿಜಯಸರಸ್ವತಿ ಬಿ. ಪ್ರಸ್ತಾವನೆಗೈದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪವನ್‍ಕಾರ್ಯಕ್ರಮ ನಿರೂಪಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top