ಕಾರವಾರ: ಕಾರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಅವಶ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಬದ್ದವಾಗಿದ್ದು, ಇದಕ್ಕಾಗಿ ಅಗತ್ಯವಿರುವ ಅನುದಾನವನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ. ಸೈಲ್ ಹೇಳಿದರು.
ಅವರು ಶುಕ್ರವಾರ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ, ಕೆ.ಎಸ್.ಎಂ.ಸಿ.ಎ ಸಂಸ್ಥೆಯ ಸಿ.ಎಸ್.ಆರ್ ಅನುದಾನದಡಿ 35 ಲಕ್ಷ ರೂ ವೆಚ್ಚದಲ್ಲಿ ಕಾಲೇಜಿನ ಮೂರನೇ ಮಹಡಿಯಲ್ಲಿ ಸಭಾ ಭವನ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಸರ್ಕಾರದಿಂದ ಕಾರವಾರ ವಿಧಾನಸಭಾ ಕ್ಷೇತ್ರಕ್ಕೆ 15 ಕೋಟಿಯ ವೆಚ್ಚದ 3 ಶಾಲೆಗಳು ಮಂಜೂರಾಗಿದ್ದು, ಕಾರವಾರದ ಪದವಿ ಪೂರ್ವ ಕಾಲೇಜಿನ ಸುಸಜ್ಜಿತ ಕ್ಯಾಂಟೀನ್ ಬೇಡಿಕೆ ಸಹ ಇದ್ದೂ ಅದನ್ನೂ ಕೂಡಾ ಪರಿಗಣಿಸಲಾಗುವುದು, ಈ ಕಾಲೇಜು ರಾಜ್ಯದ ಮಾದರಿ ಪದವಿ ಪೂರ್ವ ಕಾಲೇಜಾಗಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ಸಚಿವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಬಾರಿಯೂ ಕೂಡಾ ಕಾಲೇಜಿನಲ್ಲಿ ಶೇ.100 ರಷ್ಟು ಫಲಿತಾಂಶ ಬರುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ ಏನಗಗೌಡರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ್, ಪ್ರಾಂಶುಪಾಲ ರಮೇಶ್ ಪತ್ರೇಕರ್, ಕಾಲೇಜು ಅಭಿವೃಧ್ದಿ ಸಮಿತಿ ಉಪಾಧ್ಯಕ್ಷ ಜಿ.ಪಿ. ನಾಯ್ಕ್, ಸದಸ್ಯರಾದ ಮಾರುತಿ ನಾಯ್ಕ್, ರತ್ನಾಕರ ನಾಯ್ಕ್, ಮತ್ತಿತರರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


