ಶಿವಮೊಗ್ಗ, ಫೆ. 24: ಪ್ರಸಾರ ಭಾರತಿಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಆಕಾಶವಾಣಿಯ 10 ಕಿಲೋವ್ಯಾಟ್ ಸಾಮರ್ಥ್ಯದ ನೂತನ ಎಫ್ಎಂ ಪ್ರೇಷಕ ಕೇಂದ್ರದ ಉದ್ಘಾಟನಾ ಸಮಾರಂಭವು ಗುರುವಾರ (ಫೆಬ್ರವರಿ 26) ಮಧ್ಯಾಹ್ನ 12.30 ಗಂಟೆಗೆ ಶಿವಮೊಗ್ಗದ ವಿದ್ಯಾನಗರದಲ್ಲಿರುವ ಎಫ್ಎಂ ಪ್ರೇಷಕ ಕೇಂದ್ರದಲ್ಲಿ ನಡೆಯಲಿದೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಡಾ. ಎಲ್. ಮುರುಗನ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರೇಷಕವನ್ನು ಉದ್ಘಾಟಿಸುವ ನಿರೀಕ್ಷೆಯಿದೆ.
ಗೌರವಾನ್ವಿತ ಲೋಕಸಭಾ ಸಂಸದರಾದ ಬಿ. ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಸೇರಿದಂತೆ ಜಿಲ್ಲೆಯ ಹಲವು ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ತಿಳಿದುಬಂದಿದೆ.
ಕಾರ್ಯಕ್ರಮದಲ್ಲಿ ಭದ್ರಾವತಿ ಶಾಸಕ ಬಿ. ಕೆ. ಸಂಗಮೇಶ್ವರ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ, ಶಿವಮೊಗ್ಗ ಶಾಸಕ ಎಸ್. ಎನ್. ಚನ್ನಬಸಪ್ಪ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯ ನಾಯ್ಸ್, ಶಿಕಾರಿಪುರ ಶಾಸಕ ಬಿ. ವೈ. ವಿಜಯೇಂದ್ರ ಭಾಗವಹಿಸುವ ನಿರೀಕ್ಷೆಯಿದೆ.
ಇದಲ್ಲದೆ, ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ಡಾ. ಧನಂಜಯ ಸರ್ಜಿ, ಬಲ್ಕಿಶ್ ಬಾನು ಹಾಗೂ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೌರವ್ ದ್ವಿವೇದಿ ಅವರು ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆ ಇದೆ.
ದಕ್ಷಿಣ ವಲಯದ ಅಪರ ಮಹಾನಿರ್ದೇಶಕಿ (ಬ್ರಾಡ್ಕಾಸ್ಟ್ ಆಪರೇಷನ್ಸ್) ಶ್ರೀಮತಿ ಗೀತಾ ರಾಣಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಹೊಸ 10 ಕಿಲೋವ್ಯಾಟ್ ಎಫ್ಎಂ ಪ್ರೇಷಕದ ಆರಂಭದಿಂದ ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಕಾಶವಾಣಿ ಪ್ರಸಾರದ ವ್ಯಾಪ್ತಿ ಮತ್ತು ಧ್ವನಿ ಗುಣಮಟ್ಟವು ಹೆಚ್ಚಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಸಾರ್ವಜನಿಕ ಪ್ರಸಾರ ಸೇವೆಯ ಬಲವರ್ಧನೆಯತ್ತ ಈ ಯೋಜನೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

