ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ ಜಾನಪದ ಎಸ್ ಬಾಲಾಜಿ

Upayuktha
0


ಬ್ರಹ್ಮಾವರ: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಫೆ.27 ಶುಕ್ರವಾರ ಆಯೋಜಿಸಿದ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ ಜಾನಪದ ಎಸ್ ಬಾಲಾಜಿ ಮಾತನಾಡುತ್ತಾ, ಬುಡಕಟ್ಟು ಸಮುದಾಯದವರಿಗೆ ಪಾರಂಪರಿಕ ಜ್ಞಾನವಿರುತ್ತದೆ, ಕುಡುಬಿ ಸಮುದಾಯಗಳ ಪಾರಂಪರಿಕ ಆಚರಣೆಗಳು, ಮೌಕಿಕ ಪರಂಪರೆ ಹಾಗೂ ಪ್ರದರ್ಶನ ಕಲೆಗಳ ಕುರಿತು ಪಠ್ಯಆಗಬೇಕು ಹಾಗೂ ಪ್ರತ್ಯೇಕ ಕರ್ನಾಟಕ ಬುಡಕಟ್ಟು ಅಕಾಡೆಮಿ ಸ್ಥಾಪನಾಗಬೇಕೆಂದು ಸರ್ಕಾರವನ್ನು ಅಗ್ರಹಿಸಿದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ ಗಣೇಶ್ ಗಂಗೊಳ್ಳಿ, ಜನಪದ ಹಾಗೂ ಬುಡಕಟ್ಟು ಕಲಾವಿದರ ಕುರಿತು  ಉಡುಪಿ ಜಿಲ್ಲಾಧ್ಯಂತ ಸಮೀಕ್ಷೆ ಕೈಗೊಳ್ಳಲಾಗುವುದು. ದಶಮಾನೋತ್ಸವ ಅಂಗವಾಗಿ ಗ್ರಾಮ ಘಟಕಗಳನ್ನು ಸಹ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.


ಹಿರಿಯ ಕುಡುಬಿ ಹೋಳಿ ಕಲಾವಿದರಾದ ಶೀನ ನಾಯ್ಕ್ ಮಂಡಕರ ಹಾಗೂ ರಾಮಣ್ಣ ನಾಯ್ಕ್ ರವರನ್ನು ಅಭಿನಂದಿಸಿ ಗೌರವಿಸಲಾಯಿತು.


ಕುಡುಬಿ ಸಮುದಾಯದ ನೃತ್ಯ ಪ್ರದರ್ಶನ ಹಾಗೂ ಕೋಲಾಟವನ್ನು ಏರ್ಪಡಿಸಲಾಗಿತ್ತು. ದೇಗುಲದ ಟ್ರಸ್ಟಿ  ರಾಜಾರಾಮ್ ಶೆಟ್ಟಿ, ಪ್ರತಾಪ್ ಶೆಟ್ಟಿ ಕೊಳ್ಕೆಬೈಲು, ಜಿಲ್ಲಾ ಪ್ರ. ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಸದಾನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top