ಪರೋಪಕಾರವೇ ಪುಣ್ಯ ಪರಪೀಡನೆಯೇ ಪಾಪ: C.A. ಎಸ್.ಎಸ್. ನಾಯಕ್

Upayuktha
0

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ: ಪಂಚಮ ದಿನ




ಕೊಂಚಾಡಿ: ಮಹಿಳೆಯೊಬ್ಬಳು ಶಿಕ್ಷಿತಳಾದರೆ ಸಮಾಜವೊಂದು ಉದ್ಧಾರವಾದಂತೆ ನಮ್ಮ ಧರ್ಮ ಪುರಾಣ ಕಾಲದಿಂದಲೂ ಸ್ತ್ರೀಯರಿಗೆ ಉನ್ನತವಾದ ಸ್ಥಾನವನ್ನು ನೀಡಿದೆ. ನಮ್ಮ ಧರ್ಮಗ್ರಂಥಗಳಾದ ಭಗವದ್ಗೀತೆ, ಹದಿನೆಂಟು ಪುರಾಣಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾದುದು ಅವುಗಳನ್ನು ಎಲ್ಲರೂ ಅಭ್ಯಸಿಸಬೇಕು. ಸಾಧ್ಯವಿಲ್ಲವಾದರೆ ಅವುಗಳ ತಾತ್ಪರ್ಯದಂತೆ ಪರಪೀಡನೆ ಮಾಡದೇ ಪರೋಪಕಾರಿಯಾಗಿ ಬದುಕಬೇಕು ಎಂದು ಎಸ್.ಎಸ್ ನಾಯಕ್ ಆಂಡ್ ಅಸೋಸಿಯೇಟ್ಸ್ ನ ಪಾಲುದಾರರಾದ ಎಸ್.ಎಸ್.ನಾಯಕ ಇವರು ನುಡಿದರು.


ಆವರು ಯಕ್ಷ ಸ್ನೇಹ ಕಲಾಪ್ರತಿಷ್ಠಾನ((ರಿ) ಕೊಂಚಾಡಿ ಇವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ ಯಕ್ಷಮಂಜರಿಯ ಪಂಚಮ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ವೇದಮೂರ್ತಿ ಮಂದಾರ ಬಯಲು ಶ್ರೀ ಶರತ್ ಭಟ್ ದೀಪ ಪ್ರಜ್ವಲನೆ ಮಾಡಿ ಶುಭ ನುಡಿಗಳನ್ನಾಡಿದರು. ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ತಿನ ಗುರುಪ್ರಸಾದ್ ಕಡಂಬಾರ್, ಕಾರ್ತಿಕ ಸ್ಥಾನದ ಅಧ್ಯಕ್ಷರಾದ ಸದಾನಂದ ದೇವಾಡಿಗ ಕೊಂಚಾಡಿ ಮಹಾಕಾಳಿ ವೈವಸ್ಥಾನದ ಸೀತಾರಾಮ. ಕೆ. ಖ್ಯಾತ ಯಕ್ಷಗಾನ ಸ್ತ್ರೀವೇಷಧಾರಿಗಳಾದ ಸಂಜಯ ಕುಮಾರ್ ಗೋಣಿಬೀಡು, ಭ್ರಾಮರಿ ಮಹಿಳಾ ಕಲಾವೃಂದ ಇದರ ಸಂಚಾಲಕಿ ನಳಿನಿ ಮೋಹನ್ ಉಪಸ್ಥಿತರಿದ್ದರು.


ಈ ಸಂಧರ್ಭ ಯಕ್ಷ ಸ್ನೇಹ ಕಲಾಪ್ರತಿಷ್ಠಾನದ ಗೌರವಾಧ್ಯಕ್ಷರಾದ ಮಧುಸೂದನ ಅಲೆವೂರಾಯ ಆಧ್ಯಕ್ಷೆ ಗೀತಾಲಕ್ಷ್ಮೀಶ, ಪ್ರತಿಷ್ಠಾನದ ಪದಾಧಿಕಾರಿಗಳಾದ ಮೋಹಿನಿ ಗೋಪಾಲ, ಅವನೀಶ ಭಟ್, ಶಿವಪ್ರಸಾದ್ ಕೊಕ್ಕಡ, ಹರೀಶ ಪಾಟಾಳಿ, ಅರುಣ್ ಕುಮಾರ್, ಗಣೇಶ ಬಿ.ಜಿ., ಯೋಗೀಶ ದೇವಾಡಿಗ, ಸೀಮಾ ಅರುಣ್, ಪ್ರಜ್ಞಾ ವಸಂತ, ಅನುರಾಧ ಯೋಗೀಶ, ಆದ್ಯಾ, ಲಕ್ಷ್ಯಾ, ಕೃತಿ, ಹೃತ್ವಿ, ಲಕ್ಷಾ, ವೃಷಭೇಂದ್ರ, ಹಾಗೂ ನೂರಾರು ಕಲಾಭಿಮಾನಿಗಳು ಉಪಸ್ಥಿತರಿದ್ದರು. ನಂತರ ಶ್ರೀ ಭ್ರಾಮರಿ ಮಹಿಳಾ ಕಲಾವೃಂದ ಅಶೋಕನಗರ ಇದರ ಮಹಿಳಾ ಕಲಾವಿದರಿಂದ ಸುದರ್ಶನ ವಿಜಯ ತಾಳಮದ್ದಲೆ ಕಾರ್ಯಕ್ರಮ ನಡೆಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top