ಪುತ್ತೂರು: ಮಂಗಳೂರಿನ ಎಜೆ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಇಲ್ಲಿ ನಡೆದ 'ಎಜೆಐಎಂ ಯಕ್ಷಕಲೋತ್ಸವ 2026' ಎನ್ನುವ ಯಕ್ಷಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಕಲಾ,ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜು ಪುತ್ತೂರು ಇಲ್ಲಿನ ಯಕ್ಷರಂಜಿನಿ ಘಟಕದ ವಿದ್ಯಾರ್ಥಿಗಳು ನಡೆಸಿ ಕೊಟ್ಟ 'ಸುಧನ್ವ ಮೋಕ್ಷ' ಎನ್ನುವ ಯಕ್ಷಗಾನ ಪ್ರಸಂಗದಲ್ಲಿ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಭಾಗ್ಯಶ್ರೀ ಕೆ ಇವರ ಸ್ತ್ರೀ ವೇಷ ಪ್ರಭಾವತಿ ಪಾತ್ರಕ್ಕೆ ಉತ್ತಮ ಸ್ತ್ರೀ ವೇಷ ಪ್ರಶಸ್ತಿ ಲಭಿಸಿದೆ.
ಇವರು ಕಾಸರಗೋಡು ತಾಲೂಕಿನ ಕುಂಚಿನಡ್ಕ ನಿವಾಸಿ ಚಂದ್ರಶೇಖರ ಶರ್ಮ ಹಾಗೂ ಉಷಾದೇವಿ ದಂಪತಿಗಳ ಪುತ್ರಿ. ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


