ದೂರದೃಷ್ಟಿಯಿಲ್ಲದ, ಅನುಷ್ಠಾನಕ್ಕೆ ಅಸಾಧ್ಯ ಘೋಷಣೆಗಳ ಬಜೆಟ್: ಪ್ರಭಾಕರ ಪ್ರಭು ಟೀಕೆ

Upayuktha
0



ಬಂಟ್ವಾಳ: ರಾಜ್ಯ ಸರ್ಕಾರ ಮಂಡಿಸಿರುವ ಈ ವರ್ಷದ ಬಜೆಟ್ ದೂರದೃಷ್ಟಿಯಿಲ್ಲದ ಹಾಗೂ ಅನುಷ್ಠಾನಕ್ಕೆ ಅಸಾಧ್ಯವಾದ ಕೇವಲ ಅಂದಾಜು ಲೆಕ್ಕಾಚಾರದ ಘೋಷಣೆಗಳ ಸಮೂಹವಾಗಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಟೀಕಿಸಿದ್ದಾರೆ.


ಬಜೆಟ್‌ನಲ್ಲಿ ಮತಬೇಟೆ ಉದ್ದೇಶದಿಂದ ಸೀಮಿತ ವರ್ಗದ ಓಲೈಕೆಗೆ ಉತ್ತೇಜನ ನೀಡಲಾಗಿದೆ ಎಂದು ಅವರು ಆರೋಪಿಸಿದರು. ಕರಾವಳಿ ಭಾಗದ ಜನತೆ ಬಹುಕಾಲದಿಂದ ನಿರೀಕ್ಷಿಸುತ್ತಿರುವ ಐಟಿ ಉದ್ದಿಮೆಗಳ ಅಭಿವೃದ್ಧಿಗೆ ಯಾವುದೇ ಸ್ಪಷ್ಟ ಕ್ರಮಗಳನ್ನು ಕೈಗೊಂಡಿಲ್ಲವೆಂದು ಅವರು ಹೇಳಿದರು.


ಇದೇ ವೇಳೆ ಅಸಂಬದ್ಧ ನಿಯಮಗಳ ಪ್ರಕಾರ ಅತಿಯಾದ ತೆರಿಗೆ ಸಂಗ್ರಹದ ಗುರಿಯನ್ನು ನಿಗದಿಪಡಿಸಲಾಗಿದೆ. ಬೆಲೆ ಏರಿಕೆಯ ನಡುವೆಯೇ ಎಫ್‌ಸಿ (ಫಿಟ್ನೆಸ್ ಸರ್ಟಿಫಿಕೆಟ್) ನವೀಕರಣದ ಹೆಸರಿನಲ್ಲಿ ರಿಕ್ಷಾ ಚಾಲಕರ ಮೇಲೆ ಹೆಚ್ಚುವರಿ ಹೊರೆ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಕೆಲವರಿಂದ ಲೂಟಿ ಮಾಡಿ ಮತ್ತೊಬ್ಬರ ಪಾಲಿಗೆ ಪ್ರಯೋಜನ ನೀಡುವಂತೆಯೇ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು. ಕೃಷಿ ಹಾಗೂ ತೋಟಗಾರಿಕೆ ಕ್ಷೇತ್ರಗಳಿಗೆ ವಿಶೇಷ ಯೋಜನೆಗಳನ್ನು ಪ್ರಕಟಿಸದಿರುವುದು ರೈತರ ನಿರೀಕ್ಷೆಗೆ ಧಕ್ಕೆಯಾಗಿದೆ ಎಂದು ಅವರು ಹೇಳಿದರು.


ಒಟ್ಟಾರೆ, ಮರುಪಾವತಿಗೆ ಸಾಧ್ಯವಾಗದ ಸಾಲದ ಸುಳಿಯಲ್ಲಿ ರಾಜ್ಯವನ್ನು ತಳ್ಳುವಂತೆಯೇ ಈ ವರ್ಷದ ಬಜೆಟ್ ರೂಪುಗೊಂಡಿದೆ ಎಂದು ಪ್ರಭಾಕರ ಪ್ರಭು ಅಭಿಪ್ರಾಯ ವ್ಯಕ್ತಪಡಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top