ಅಶೋಕ್ ವೆಂಕಯ್ಯ ಗುತ್ತೇದಾರ್ ಸ್ಮರಣಾರ್ಥ ಉಚಿತ ಆರೋಗ್ಯ ಶಿಬಿರ ನಾಳೆ

Upayuktha
0


ಕಲಬುರಗಿ: ಅಶೋಕ್ ವೆಂಕಯ್ಯ ಗುತ್ತೇದಾರ್ ಅವರ 16 ನೇ ಪುಣ್ಯಸ್ಮರಣಾರ್ಥ ನಾಳೆ ಮಂಗಳವಾರ (ಮಾ. 3ರಂದು) ಅಫ್ಜಲ್ ಪುರ ತಾಲೂಕಿನ ಸ್ಟೇಷನ್ ಗಾಣಗಾಪುರದಲ್ಲಿ ಕಣ್ಣಿನ ಉಚಿತ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜೀವಾ  ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ದಿ. ಅಶೋಕ್ ಗುತ್ತೇದಾರ್ ಅವರ ಪತ್ನಿ ಶ್ರೀಮತಿ ಜಮುನಾ ಗುತ್ತೇದಾರ್ ತಿಳಿಸಿದ್ದಾರೆ.


ಸ್ಟೇಷನ್ ಗಾಣಗಾಪುರದ ವೆಂಕಯ್ಯ ಕೂಸಯ್ಯ ಗುತ್ತೇದಾರ ಸಮಾಧಿ ಆವರಣದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಆರೋಗ್ಯ ಶಿಬಿರ ನಡೆಯಲಿದೆ. ಅನುಗ್ರಹ ಕಣ್ಣಿನ ಆಸ್ಪತ್ರೆಯ ತಜ್ಞರಾದ ಡಾ. ಪ್ರಭುಗೌಡ ಪಾಟೀಲ್ ಬಿ ಎಲ್ ಡಾ. ಮಾಲಿನಿ ಪಿ.ಎಲ್, ಸ್ಟೇಷನ್ ಗಾಣಗಾಪುರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಸಂಗೋಳಕರ್ ಡಾ. ಅಮರ್ ದೀಪ ಪವಾರ್ ಜೀವಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಅಜಯ್ ಗುತ್ತೇದಾರ್, ಡಾ. ಶಿಫಾಲಿ ಎ. ಗುತ್ತೇದಾರ್ ಹಾಗೂ ಡಾ. ದಿವ್ಯಶ್ರೀ ಎಸ್ ಗುತ್ತೇದಾರ್ ಭಾಗವಹಿಸಲಿದ್ದಾರೆ.


ಶಸ್ತ್ರಚಿಕಿತ್ಸೆಯ ಅಗತ್ಯವಿರುವ ರೋಗಿಗಳಿಗೆ ಕಲಬುರಗಿಯಲ್ಲಿ ಸೂಕ್ತ ಚಿಕಿತ್ಸಾ ವ್ಯವಸ್ಥೆಯನ್ನು ಮಾಡಲಾಗುವುದು. ಶಿಬಿರಕ್ಕೆ ಬರುವವರು ಆಧಾರ್ ಕಾರ್ಡ್ ರೇಷನ್ ಕಾರ್ಡ್ ಚುನಾವಣಾ ಗುರುತು ಪತ್ರ ಥವಾ ಎಸ್‌ಬಿಐ ಕಾರ್ಡ್ ಯಾವುದಾದರೂ ಒಂದು ದಾಖಲೆಯ ಪ್ರತಿಯೊಂದು ಆಗಮಿಸಬೇಕು ಎಂದು ಜಮುನಾ ಗುತ್ತೇದಾರ್ ತಿಳಿಸಿದ್ದಾರೆ.


ಈ ಕಾರ್ಯಕ್ರಮದಲ್ಲಿ ಬಡದಾಳ ತೇರಿನ ಮಠದ ಪೂಜ್ಯಶ್ರೀ ಚನ್ನಮಲ್ಲ ಶಿವಾಚಾರ್ಯರು ಚೌಡಾಪುರಾದ ಚಿಣ ಮಗೇರದ ಶ್ರೀ ಮಹಾಂತ ಶಿವಾಚಾರ್ಯರು ಹಾಗೂ ವಿಕೆಜಿ ಕುಟುಂಬದ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top