ಮಂಗಳೂರು: ನಮ್ಮ ತಾಯಿ ಭಾಷೆ ನಮ್ಮ ಅಮ್ಮನಂತೆ ಪೂಜನೀಯ, ಅದನ್ನು ಪ್ರೀತಿಸುತ್ತಾ ಬದುಕುವುದು ಸಂತಸ ಮತ್ತು ನೆಮ್ಮದಿ ನೀಡುತ್ತದೆ ಎಂದು ರೇಡಿಯೋ ಕೇಳುಗರ ಸಂಘದ ಸ್ಥಾಪಕಾಧ್ಯಕ್ಷ ಹಾಗೂ ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ ಅಧ್ಯಕ್ಷ ಯು. ರಾಮರಾವ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು- ಮಂಗಳೂರು ತಾಲೂಕು ಘಟಕ ಅವರ ಮನೆಗೆ ಭೇಟಿ ನೀಡಿ ಗೌರವಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಾ ಆಂಟಿ, ಅಂಕಲ್ ಬೇಡ; ಅತ್ತೆ, ಮಾವ, ಚಿಕ್ಕಮ್ಮ, ಚಿಕ್ಕಪ್ಪ, ಅಣ್ಣ, ತಮ್ಮ, ಭಾವ ಎನ್ನುವ ಭಾವದಲ್ಲಿ ಹೃದಯದ ಪ್ರೀತಿ ಅರಳುತ್ತದೆ ಎಂದರು.
ರೇಡಿಯೋ ಕೇಳುಗರ ಸಂಘದ ಉದ್ಘಾಟನೆ ಮಾಡಿದ ಅಮೃತ ಸೋಮೇಶ್ವರರು ಆಕಾಶವಾಣಿಯು ನಮ್ಮ ಮಿತ್ರ, ತತ್ವಬೋಧಕ, ಮತ್ತು ಮಾರ್ಗದರ್ಶಕ ಎಂದಿದ್ದರು. ಸಂಘದ ಕಾರ್ಯಕ್ರಮಕ್ಕೆ ಶಿವರಾಮ ಕಾರಂತರು, ಕು. ಶಿ. ಹರಿದಾಸ ಭಟ್ಟರು ಮುಂತಾದ ಖ್ಯಾತನಾಮರು ಬಂದಿದ್ದನ್ನು ನೆನಪಿಸಿಕೊಂಡರು.
ತಮಿಳು ಭಾಷೆಯನ್ನೋದಿದ ರಾಮರಾಯರು ಇಲ್ಲಿನ ಭಾಷೆ ಸಂಸ್ಕೃತಿಯನ್ನು ಪ್ರೀತಿಸುತ್ತಾ ರೇಡಿಯೋ ಕೇಳುಗರ ಸಂಘವನ್ನು ಕಟ್ಟಿ ಬೆಳೆಸಿದ ಪರಿಯನ್ನು ಕಾರ್ಯದರ್ಶಿ ಡಾ.ಮುರಲೀಮೋಹನ್ ಚೂಂತಾರು ಕೊಂಡಾಡಿದರು. ಮುಖ್ಯ ಅತಿಥಿಯಾಗಿದ್ದ ಹೊಸ ದಿಗಂತ ಸಂಪಾದಕ ಪ್ರಕಾಶ್ ಇಳಂತಿಲ, ಆಕಾಶವಾಣಿ ಪದ ಮತ್ತು ಇತಿಹಾಸದ ಬಗ್ಗೆ ವಿವರಿಸುತ್ತಾ ರಾಮರಾಯರಂತಹ ಎಲೆ ಮರೆಯ ಸಾಧಕರನ್ನು ಗುರುತಿಸಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ ಇವರ ಕುಟುಂಬ ದೊಡ್ಡ ದಾನದ ಪರಂಪರೆ ಹೊಂದಿದೆ ಎಂದು ನುಡಿದರು.
ಘಟಕದ ಅಧ್ಯಕ್ಷ ಡಾ. ಮಂಜುನಾಥ ರೇವಣ್ಕರ್, ರಾಮರಾವ್ ಹಾಗೂ ಸಾವಿತ್ರಿ ರಾಮರಾವ್ ದಂಪತಿಯನ್ನು ಸಂಮಾನಿಸಿ ಅಭಿನಂದನೆಯ ಮಾತುಗಳನ್ನಾಡಿದರು.
ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ಸ್ವಾಗತಿಸಿ, ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ ವಂದಿಸಿದರು. ಜಿಲ್ಲಾ ಸಮಿತಿಯ ಸನತ್ ಕುಮಾರ್ ಜೈನ್, ಸಮಿತಿ ಸದಸ್ಯರಾದ ರವೀಂದ್ರನಾಥ್ ಕೆ.ಪಿ., ಸುನಂದಾ ಪೈಲೂರು ಮುಂತಾದವರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

