ಭಾಷಾ ವೈವಿಧ್ಯತೆ ಮತ್ತು ದಕ್ಷಿಣ ಭಾರತದ ಅಸ್ಮಿತೆ: 20-21ರಂದು ರಾಷ್ಟ್ರೀಯ ವಿಚಾರ ಸಂಕಿರಣ

Upayuktha
0

 



ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಕಾಲೇಜು ಆವರಣದಲ್ಲಿ ಮಾರ್ಚ್ 20 ಮತ್ತು 21, 2026ರಂದು “ಭಾಷಾ ವೈವಿಧ್ಯತೆ ಮತ್ತು ದಕ್ಷಿಣ ಭಾರತದ ಅಸ್ಮಿತೆ” ಎಂಬ ವಿಷಯದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.


ಈ ವಿಚಾರ ಸಂಕಿರಣವನ್ನು ಹಂಪಿಯ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗ, ಮೂಡುಬಿದಿರೆಯ ಆಳ್ವಾಸ್ ಕಾಲೇಜು (ಸ್ವಾಯತ್ತ) ಕನ್ನಡ ವಿಭಾಗ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು ಇದರ ಸಹಯೋಗದಲ್ಲಿ ನಡೆಯಲಿದೆ.


ದಕ್ಷಿಣ ಭಾರತದ ಭಾಷೆಗಳು ಮತ್ತು ಸಂಸ್ಕೃತಿಗಳು ಬದಲಾಗುತ್ತಿರುವ ಸ್ಥಿತಿಗತಿಗಳನ್ನು ಚರ್ಚಿಸುವುದರ ಜೊತೆಗೆ, ಈ ಪ್ರದೇಶದಲ್ಲಿ ಭಾಷಾ ವೈವಿಧ್ಯತೆಯ ಮಹತ್ವವನ್ನು ಉಲ್ಲೇಖಿಸುವುದು ವಿಚಾರ ಸಂಕಿರಣದ ಮುಖ್ಯ ಉದ್ದೇಶವಾಗಿದೆ. ದಕ್ಷಿಣ ಭಾರತದಲ್ಲಿ ಬಹುಭಾಷಾ ಪರಂಪರೆ ದೀರ್ಘಕಾಲದಿಂದಲೂ ಇದ್ದರೂ, ಆಡಳಿತಾತ್ಮಕ ಮತ್ತು ರಾಜಕೀಯ ಒತ್ತಡಗಳ ಪರಿಣಾಮವಾಗಿ ಹಲವಾರು ಪ್ರಾದೇಶಿಕ ಭಾಷೆಯ ಹೆಗ್ಗುರುತುಗಳು ಅಂಚಿಗೆ ಸರಿದಿರುವುದರ‌‌ ಬಗೆಗೆ ಬೆಳಕು ಚೆಲ್ಲಲಿದೆ.


ಭಾಷೆ ಮತ್ತು ಸಾಂಸ್ಕೃತಿಕ ವೈವಿಧ್ಯತೆಗೆ ಸಂಬಂಧಿತ ವಿಷಯಗಳ ಕುರಿತು ವಿದ್ವಾಂಸರು ಮತ್ತು ಸಂಶೋಧಕರು ಚರ್ಚೆ ನಡೆಸಲು ಈ ವಿಚಾರ ಸಂಕಿರಣ ವೇದಿಕೆ ಒದಗಿಸಲಿದೆ.


ಕರ್ನಾಟಕ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಿ.ವಿ. ಪರಮಶಿವಮೂರ್ತಿ, ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಮೋಹನ್ ಆಳ್ವಾ, ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಪ್ರೊ. ಮಾಧವ ಪೆರಾಜೆ, ಮೂಡಬಿದಿರೆ ಆಳ್ವಾಸ್ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ. ಕುರಿಯನ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್ ಮಂಗಳೂರು ಭಾಗವಹಿಸಲಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top