ಮಂಗಳೂರು: ದೇರಳಕಟ್ಟೆಯ ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೋಯ ನರ್ಸಿಂಗ್ ಕಾಲೇಜಿನ ನರ್ಸಿಂಗ್ ಶಿಕ್ಷಣ ವಿಭಾಗ ಮತ್ತು ಪ್ರಥಮ ವರ್ಷದ ಎಂ.ಎಸ್ಸಿ ನರ್ಸಿಂಗ್ ವಿಭಾಗದ ವತಿಯಿಂದ ಡಿಜಿಟಲ್ ಶಿಕ್ಷಣಶಾಸ್ತ್ರ ಬೋಧನ -ಕಲಿಕೆಯಲ್ಲಿ ಕಲೆ ವಿಷಯದ ಬಗ್ಗೆ ಸಂಸ್ಥೆಯ ಯೆಂಡೋರೆನ್ಸ್ ಸಭಾಂಗಣದಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯಿತು.
ಸಮ್ಮೇಳನ ಉದ್ಘಾಟಿಸಿದ ಲಕ್ಷ್ಮಿ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಲರಿಸ್ಸಾ ಮಾರ್ಥಾ ಸ್ಯಾಮ್ಸ್ ಮಾತನಾಡಿ "ವಿದ್ಯಾರ್ಥಿಗಳು ಮತ್ತು ಬೋಧಕರು ಕೃತಕ ಬುದ್ಧಿಮತ್ತೆ ಸಾಧನಗಳನ್ನು ಬುದ್ಧಿವಂತಿಕೆಯಿಂದ ಬಳಸಿಕೊಳ್ಳಬೇಕು. ಡಿಜಿಟಲ್ ನೈತಿಕತೆ ಮತ್ತು ಆಧುನಿಕ ಶಿಕ್ಷಣದಲ್ಲಿ ಲಭ್ಯವಿರುವ ತಾಂತ್ರಿಕ ಸೌಲಭ್ಯಗಳ ಬಗ್ಗೆ ಅರಿವು ಹೊಂದಿರುವುದು ಅತ್ಯಗತ್ಯ ಎಂದರು.
ಮುಖ್ಯ ಅತಿಥಿಯಾಗಿದ್ದ ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅಶ್ವಿನಿ ದತ್ .ಆರ್.ಅವರು ಪರಿವರ್ತನಾಶೀಲ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು.
ಯೆನೆಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಲೀನಾ ಕೆ.ಸಿ. ಅಧ್ಯಕ್ಷತೆ ವಹಿಸಿದ್ದರು. ವಿವಿಧ ರಾಜ್ಯಗಳ ೩೫೦ ಪ್ರತಿನಿಧಿಗಳು ಭಾಗವಹಿಸಿದ್ದರು. ಸಮ್ಮೇಳನದ ಅಧ್ಯಕ್ಷೆ ಡಾ. ಪ್ರಿಯಾ ರೇಷ್ಮಾ ಅರಾನ್ಹಾ ಸ್ವಾಗತಿಸಿ, ಕಾರ್ಯದರ್ಶಿ ನಿತ್ಯಶ್ರೀ ಬಿ.ವಿ. ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


