ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಇಂದು ಬಲಿಷ್ಠ, ನಾಳೆ ಸುರಕ್ಷಿತ-ಸ್ವರಕ್ಷಣೆ ಕಲಿಯಿರಿ ವಿಷಯದ ಕುರಿತು ಕೌಶಲ್ಯ ವರ್ಧನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನುಅರ್ಥಶಾಸ್ತ್ರ ವಿಭಾಗದ ಪ್ರೊ. ರಾಮಕೃಷ್ಣ ಬಿ. ಎಂ. ವಹಿಸಿದ್ದರು. ತರಬೇತಿಯನ್ನು ಇಂಡಿಯನ್ ಅಕಾಡೆಮಿ ಆಫ್ ಮಾರ್ಷಲ್ ಆರ್ಟ್ಸ್ ನ ಕರಾಟೆ ತರಬೇತುದಾರ ಡಾ. ರಾಹುಲ್ ತೋನ್ಸೆ ಗಣೇಶ್ ಮತ್ತು ತಂಡ ನಡೆಸಿಕೊಟ್ಟರು.
ವೈಯಕ್ತಿಕ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸ್ವರಕ್ಷಣೆ ತಂತ್ರಗಳನ್ನು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಯಿತು. ಇದೇ ವೇಳೆ, ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಮತ್ತು ಪ್ರಾಯೋಗಿಕ ತರಬೇತಿ ನೀಡಲಾಯಿತು.
ಕಾರ್ಯಕ್ರಮದಲ್ಲಿಎನ್ಎಸ್ಎಸ್ ಅಧಿಕಾರಿ ಜಯಶ್ರೀ, ಭವ್ಯ ಸೇರಿದಂತೆ ನಾನಾ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


