ಪುತ್ತೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಚರಿಸುತ್ತಿರುವ ದಿ ಇಂಟರ್ ನ್ಯಾಷನಲ್ ಸೊಸೈಟಿಯು (ಇಸ್ಕಾನ್) ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಶಿಕ್ಷಣ ಮೌಲ್ಯಗಳು ಪರೀಕ್ಷೆಯಲ್ಲಿ ಪುತ್ತೂರಿನ ಸುದಾನ ವಸತಿ ಶಾಲೆಯ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರಲ್ಲಿ ವಿದ್ಯಾರ್ಥಿಗಳಾದ ಆಶ್ರಿತ್ ಕೃಷ್ಣರಾವ್ ಡಿ ಪ್ರಥಮ, ಹೃತ್ವಿಕಾ ಆರ್ ನಾಯಕ್ ದ್ವಿತೀಯ ಮತ್ತು ಮಾನ್ವಿ ವಿಶ್ವನಾಥ್ ತೃತೀಯ ಬಹುಮಾನವನ್ನು ಪಡೆದಿದ್ದಾರೆ. ವಿಜೇತರನ್ನು ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿ ಶೋಭ ನಾಗರಾಜ್ ಅಭಿನಂದಿಸಿದ್ದಾರೆ. ಸುದಾನ ಶಾಲೆಯ ಲಹರಿ ಸಾಹಿತ್ಯ ಸಂಘದ ಆಶ್ರಯದಲ್ಲಿ ಈ ಪರೀಕ್ಷೆಯು ನಡೆದಿದ್ದು ಸಹಶಿಕ್ಷಕಿ ಚೇತನಾ ಪಿ.ಕೆ ನೇತೃತ್ವ ವಹಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


