ಮಂಗಳೂರು: ಶಿಕ್ಷಣ ಕ್ಷೇತ್ರದ ದೀಪಸ್ತಂಭರಾಗಿದ್ದ ಹಾಗೂ ಅನೇಕ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ವ್ಯಕ್ತಿತ್ವವಾಗಿದ್ದ ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿ.ಎ.ಎ. ರಾಘವೇಂದ್ರ ರಾವ್ ಅವರು 17.02.2026 ರಂದು ದೇವರ ಸನ್ನಿಧಿಗೆ ಪಯಣ ಬೆಳೆಸಿದರು. ಅವರ ಅಗಲಿಕೆ ಶಿಕ್ಷಣ ಕ್ಷೇತ್ರದಾದ್ಯಂತ ಅಪಾರ ಶೋಕವನ್ನುಂಟುಮಾಡಿದೆ.
ಶಿಕ್ಷಣದ ವಿಸ್ತರಣೆ ಮತ್ತು ಗುಣಮಟ್ಟದ ಬೆಳವಣಿಗೆಗೆ ಅವರು ನೀಡಿದ ಅಮೂಲ್ಯ ಕೊಡುಗೆ, ಸಮಾಜಮುಖಿ ಚಿಂತನೆ ಮತ್ತು ಉನ್ನತ ಆದರ್ಶಗಳು ಅನೇಕ ಪೀಳಿಗೆಗಳಿಗೆ ಮಾರ್ಗದರ್ಶಕವಾಗಿವೆ. ಅವರ ಸ್ಮರಣಾರ್ಥವಾಗಿ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಶ್ರದ್ಧಾಂಜಲಿ ಕಾರ್ಯಕ್ರಮವು ಮಾರ್ಚ್ 4, 2026 ರಂದು ಬೆಳಿಗ್ಗೆ 9:30ರಿಂದ ಮುಕ್ಕದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ನಡೆಯಲಿದೆ.
ಅವರು ಪತ್ನಿ ಶ್ರೀಮತಿ ವಿಜಯಲಕ್ಷ್ಮಿ ಆರ್. ರಾವ್, ಪುತ್ರ ಡಾ. ಎ. ಶ್ರೀನಿವಾಸ ರಾವ್, ಸೊಸೆ ಪ್ರೊ. ಇಆರ್. ಶ್ರೀಮತಿ ಮಿತ್ರಾ ಎಸ್. ರಾವ್, ಪುತ್ರಿ ಶ್ರೀಮತಿ ಪದ್ಮಿನಿ ರಾವ್, ಅಳಿಯ ಡಾ. ಉದಯಕುಮಾರ್ ಮಯ್ಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಅಗಲಿದ ಮಹನೀಯರ ಆತ್ಮಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಹಾಗೂ ಅವರಿಗೆ ಗೌರವ ನಮನ ಸಲ್ಲಿಸಲು ಗಣ್ಯರು, ಸ್ನೇಹಿತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕುಟುಂಬದವರು ವಿನಂತಿಸಿದ್ದಾರೆ.


