ಮಂಗಳೂರು: ತುಲುವೆರೆ ಕಲ ಟ್ರಸ್ಟ್ (ರಿ.) ಮಂಗಳೂರು ಇದರ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕರಿಂದ ತುಳು ಮಕ್ಕಳ ಗೀತೆ ಹಾಗೂ ಮಕ್ಕಳ ಕತೆಗಳನ್ನು ಆಹ್ವಾನಿಸುತ್ತಿದೆ. ಅತ್ಯುತ್ತಮ ಮೂರು ಗೀತೆ ಹಾಗೂ ಕತೆಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಿ ಮೇ ತಿಂಗಳಲ್ಲಿ ನಡೆಯುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಗೌರವಿಸಲಾಗುವುದು. ಆಯ್ದ ಬರಹಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು.
ಗೀತೆ 12 ಸಾಲು, ಕತೆ 250 ಪದಗಳನ್ನು ಮೀರಿರಬಾರದು. ಯಾವುದೇ ಪ್ರದೇಶ, ವಯೋಮಾನದವರಿಗೆ ಭಾಗವಹಿಸಲು ಮುಕ್ತ ಅವಕಾಶವಿದ್ದು, ಬರಹಗಳು ಸ್ವರಚನೆಯಾಗಿರಬೇಕು. ಈವರೆಗೆ ಎಲ್ಲೂ ಪ್ರಕಟಗೊಂಡಿರಬಾರದು. ಬರಹಗಳನ್ನು ಅಶೋಕ ಎನ್.ಕಡೇಶಿವಾಲಯ- 7760041895 ಅಥವಾ ವಿಶ್ವನಾಥ ಕುಲಾಲ್ ಮಿತ್ತೂರು- 9900380301 ವಾಟ್ಸ್ಯಾಪ್ಗೆ ಮಾ.31ರೊಳಗೆ ಕಳುಹಿಸಬಹುದು ಎಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


