ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಉದ್ಘಾಟನೆ

Upayuktha
0


ಮಂಗಳೂರು: ಯಕ್ಷ ಸ್ನೇಹ ಕಲಾಪ್ರತಿಷ್ಠಾನ (ರಿ) ಕೊಂಚಾಡಿ ಇವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಲೆ ಅಷ್ಟಾಹ ಸಂಭ್ರಮ ಯಕ್ಷಮಂಜರಿ ಭಾನುವಾರ ಮಧ್ಯಾಹ್ನ ಭಾರತ ಮಾತಾ ಪೂಜನೆಯೊಂದಿಗೆ ಪ್ರಾರಂಭಗೊಂಡಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಶ್ರೀ ಜಯಪ್ರಕಾಶ್ ಹೆಗ್ಡೆ, ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಸಂಪರ್ಕ ಪ್ರಮುಖ್ ಪ್ರಸಾದ್ ಕೊಂಚಾಡಿ, ನಾಗಕನ್ನಿಕಾ ದೇವಸ್ಥಾನದ ಭಜನಾ ಮಂಡಳಿಯ ಅಧ್ಯಕ್ಷರಾದ ಸಾವಿತ್ರಿ ಕೋಟ್ಯಾನ್, ಇವರು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಯಕ್ಷ ಸ್ನೇಹ ಕಲಾ ಪ್ರತಿಷ್ಠಾನದ ಅಧ್ಯಕ್ಷರಾದ ಗೀತಾ ಲಕ್ಷ್ಮೀಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಂತರ ತಂಡದ ಸದಸ್ಯರಿಂದ 'ಸುದರ್ಶನ ಗರ್ವಭಂಗ, ಯಕ್ಷಗಾನ ತಾಳಮದ್ದಳೆ ನಡೆಯಿತು. ಸಂಜೆ ನಡೆದ ಕಾರ್ಯಕ್ರಮದಲ್ಲಿ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಶ್ರೀನಿವಾಸ ಭಟ್ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮವು ಅಧಿಕೃತವಾಗಿ ಉದ್ಘಾಟನೆಗೊಂಡಿತು.


ಈ ಸಂದರ್ಭ ವೇದಿಕೆಯಲ್ಲಿ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ, ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕ ದೇವಸ್ಥಾನದ ಆಡಳಿತ ಮೋಕ್ತೇಸರರಾದ ಬಾಲಕೃಷ್ಣ ಕೊಟ್ಟಾರಿ, ಬಸವ ರತ್ನ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದರಾದ ರವಿ ಅಲೆವೂರಾಯ, ಸನಾತನ ನಾಟ್ಯಾಲಯದ ವಿದುಷಿ ಶ್ರೀಲತಾ ನಾಗರಾಜ್, ಯಕ್ಷ ಮಂಜಳಾ ಕದ್ರಿ ಇದರ ಸಂಚಾಲಕಿ ಪೂರ್ಣಿಮ ಪ್ರಭಾಕರ ರಾವ್ ಪೇಜಾವರ ಯಕ್ಷ ಸ್ನೇಹ ಕಲಾಪ್ರತಿಷ್ಠಾನದ ಗೌರವಾಧ್ಯಕ್ಷರಾದ ಮಧುಸೂದನ ಅಲೆವೂರಾಯ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಛಾಯಾಗ್ರಾಹಕ ಸತೀಶ್ ಇರಾ, ವೀರರಾಣಿ ಅಬ್ಬಕ್ಕ ಗೌರವ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಗೀತಾ ಲಕ್ಷ್ಮೀಶ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಯಕ್ಷ ಮಂಜುಳ ಕದ್ರಿಯ ಸದಸ್ಯರು, ಪ್ರತಿಷ್ಠಾನದ ಪದಾಧಿಕಾರಿಗಳು, ಸದಸ್ಯರು, ಹಾಗೂ ನೂರಾರು ಕಲಾಭಿಮಾನಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top