ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಹಾಗೂ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಜಂಟಿ ಆಶ್ರಯದಲ್ಲಿ 118ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಸೋಮವಾರ ಏಪ್ರಿಲ್ 6ರಂದು ಮಧ್ಯಾಹ್ನ 1:30ಕ್ಕೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಪ್ರಾಂಶುಪಾಲರಾದ ಪ್ರೊಫೆಸರ್ ಗೋಪಾಲಕೃಷ್ಣ ಕೆ ವಹಿಸುವರು.
ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಎಸ್ ವಿ .ಎಸ್ ಟೆಂಪಲ್ ಪದವಿ ಪೂರ್ವ ಕಾಲೇಜು ಬಂಟ್ವಾಳ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ ಹಾಗೂ ಶಾರದಾ ಪಿ.ಯು ಕಾಲೇಜ್ ಮಂಗಳೂರು ಉಪ ಪ್ರಾಂಶುಪಾಲೆ ಅರುಣಾ.ಕೆ ಮತ್ತು ವಿಜಯ ಕರ್ನಾಟಕ ದೈನಿಕ ಪತ್ರಿಕೆ ಪ್ರಧಾನ ವರದಿಗಾರರಾದ ಮುಹಮ್ಮದ್ ಆರಿಫ್ ಪಡುಬಿದ್ರಿ ಮುಖ್ಯ ಸಂಪನ್ಮೂಲ ಅತಿಥಿಯಾಗಿ ಭಾಗವಹಿಸುವರು.
ನಿವೃತ್ತ ಪ್ರಶಸ್ತಿ ವಿಜೇತ ಶಿಕ್ಷಕಿ ಸುಧಾ ನಾಗೇಶ್, ಕನ್ನಡ ಉಪನ್ಯಾಸಕಿ ವಿಜಯಲಕ್ಷ್ಮಿ ಉಪಸ್ಥಿತರಿರುವರು ಎಂದು ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


