ಹುನಗುಂದ: ನಗರದ ಆದರ್ಶ ವಿದ್ಯಾಲಯ ಚಿತ್ರಕಲಾ ಶಿಕ್ಷಕ ಹಾಗೂ ರಾಜ್ಯ ಲಲಿತಕಲಾ ಅಕಾಡೆಮಿ ಸದಸ್ಯ ಚಂದ್ರಕಾಂತ ಸರೋದೆ ರಾಷ್ಟ್ರೀಯ ಚಿತ್ರಕಲಾ ಪ್ರದರ್ಶನಕ್ಕೆ ಆಯ್ಕೆಯಾಗಿದ್ದಾರೆ.
ಈ ಪ್ರದರ್ಶನದಲ್ಲಿ ಸರೋದೆ ಅವರು ಅರ್ಕಾಲಿಕ್ ವರ್ಣದಲ್ಲಿ ಚಿತ್ರಿಸಿದ ಹನುಮಾನ್ ಚಿತ್ರ ಪ್ರದರ್ಶನಗೊಳ್ಳಲಿದೆ. ದೇಶದ 272 ಚಿತ್ರಗಳು ಆಯ್ಕೆ ಆಗಿವೆ. ಇದರಲ್ಲಿ 20 ಕಲಾವಿದರಿಗೆ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಸದ್ಯ ಆಯ್ಕೆ ಆದ ಕಲಾಕೃತಿಗೆ ರೂ.25 ಸಾವಿರ ಗೌರವಧನ ಕೊಡಲಾಗುವುದು ಎಂದು ಲಲಿತಕಲಾ ಅಕಾಡಮಿ ಕಾರ್ಯದರ್ಶಿ ರಾಜೀವ ಕುಮಾರ ಆಯ್ಕೆಯ ಆದೇಶದಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

