ಪದವಿ ಪೂರ್ವ ಶಿಕ್ಷಣದಲ್ಲಿ ಕೋಚಿಂಗ್ ಸಂಯೋಜಿತ ಪಠ್ಯಕ್ರಮ ಜಾರಿಗೆ ಸರ್ಕಾರದ ಭರವಸೆ

Upayuktha
0

ಮಂಗಳೂರು: ಇತ್ತೀಚೆಗೆ ಬೆಂಗಳೂರಿನ ಬಹು ಮಹಡಿಗಳ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಇವರ ಕಛೇರಿಯಲ್ಲಿ ಕುಪ್ಮ ಸಮಿತಿಯ ಪದಾಧಿಕಾರಿಗಳ ಜೊತೆ ನಡೆದಿರುವ ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣದಲ್ಲಿ ಇನ್ನುಮುಂದೆ ಕೋಚಿಂಗ್  ಮತ್ತು ಬೋರ್ಡ್ ಸಂಯೋಜಿತ ಪಠ್ಯಚಟುವಟಿಕೆಯನ್ನು ಅಳವಡಿಸಲು ಭರವಸೆಯನ್ನು ಮಾನ್ಯ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್ ನೀಡಿದರು. ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.


ಇದಲ್ಲದೆ ವರ್ಗಾವಣೆ ಪತ್ರವನ್ನು ಡಿಜಿಲಾಕರ್‍ ನಲ್ಲಿ ಅಳವಡಿಸುವ ಬಗ್ಗೆ ವಿಸ್ತೃತವಾದ ಚರ್ಚೆಯ ನಂತರ ಸಾಧಕ ಬಾಧಕಗಳ ಕುರಿತಂತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.


ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯು ನಿರ್ದೇಶಕರ ಅಧ್ಯಕ್ಷತೆಯಲ್ಲಿ ಕುಪ್ಮ ಸಮಿತಿಯ ಸಭೆಯನ್ನು 3 ತಿಂಗಳಿಗೊಮ್ಮೆ ನಡೆಸಲು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಶೈಕ್ಷಣಿಕ ಹಾಗೂ ಇತರೆ ಸಮಸ್ಯೆಗಳ ಕುರಿತಂತೆ ಚರ್ಚೆಯನ್ನು ನಡೆಸಿ ಸೂಕ್ತ ನಿರ್ಧಾರವನ್ನು ಕೈಗೊಳ್ಳಬಹುದೆಂದು ಅಭಿಪ್ರಾಯ ಪಡಲಾಯಿತು. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇನ್ನು ಮುಂದೆ ಕುಪ್ಮದ ಸಹಯೋಗದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕೊಡುವ ಬಗ್ಗೆಯು ಚರ್ಚಿಸಲಾಯಿತು. ನಕಲಿ ಕಾಲೇಜುಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಕುಪ್ಮ ಸರ್ಕಾರಕ್ಕೆ ಮನವಿ ಮಾಡಿತು. ಬೋಧನ ಶುಲ್ಕಕ್ಕೆ ಸಂಬಂಧಪಟ್ಟ ಹಾಗೆ ಶಿಕ್ಷಣ ಕಾಯ್ದೆಯ ನಿಯಮಾವಳಿ ಪ್ರಕಾರ ಸೂತ್ರವನ್ನು ಅಳವಡಿಸಿ ಬೋಧನಾ ಶುಲ್ಕವನ್ನು ಮಾರ್ಗಸೂಚಿಯಲ್ಲಿ ನಮೂದಿಸುವಂತೆ ಚರ್ಚಿಸಲಾಯಿತು. ಸುಮಾರು 2 ಗಂಟೆಗೂ ಹೆಚ್ಚಿನ ಸಮಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರುವ ವಿಷಯಗಳ ಕುರಿತಂತೆ ಸುಧೀರ್ಘವಾಗಿರುವಂತಹ ಚರ್ಚೆಯನ್ನು ನಡೆಸಲಾಯಿತು.


ಈ ಚರ್ಚೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ನಿರ್ದೇಶಕರಾದ ಭರತ್, ಕುಪ್ಮ ರಾಜ್ಯಾಧ್ಯಕ್ಷರಾದ ಡಾ. ಮೋಹನ್ ಆಳ್ವ, ರಾಜ್ಯ ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್ ನಾಯಕ್, ರಾಜ್ಯ ಉಪಾಧ್ಯಕ್ಷರಾದ ಸುಧಾಕರ್ ಶೆಟ್ಟಿ, ಯುವರಾಜ್ ಜೈನ್, ಜಯರಾಮ್ ಶೆಟ್ಟಿ, ರಾಜ್ಯ ಸಹಕಾರ್ಯದರ್ಶಿ ವಿಶ್ವನಾಥ್ ಶೇಷಾಚಲ, ಬೆಂಗಳೂರು ಉತ್ತರವಲಯ ಅಧ್ಯಕ್ಷರಾದ ಕೀರ್ತನ್ ಕುಮಾರ್, ಕಾರ್ಯದರ್ಶಿ ಡಾ. ದೇವರಾಜ್, ಬೆಂಗಳೂರು ದಕ್ಷಿಣ ವಲಯ ಕಾರ್ಯದರ್ಶಿ ಡಾ. ಕುಮಾರ್ ಹೆಚ್, ದಾವಣಗೆರೆ ಜಿಲ್ಲಾಧ್ಯಕ್ಷರಾದ ಶ್ರೀಧರ್, ಕಾರ್ಯದರ್ಶಿ ವಿನಯ್, ಧಾರವಾಡ ಜಿಲ್ಲಾಧ್ಯಕ್ಷರಾದ ವಿಶ್ವನಾಥ್ ಕೊರ್ವಿ, ಕಾರ್ಯದರ್ಶಿ ವೈ ಬಿ ಅಣ್ಣಿಗೇರಿ, ಮೈಸೂರು ಜಿಲ್ಲಾಧ್ಯಕ್ಷರಾದ ಮಂಜುನಾಥ್, ಉಡುಪಿ ಜಿಲ್ಲಾಧ್ಯಕ್ಷರಾದ ಸಿ ಎ ಗೋಪಾಲಕೃಷ್ಣ ಭಟ್, ಹಾವೇರಿ ಜಿಲ್ಲಾಧ್ಯಕ್ಷರಾದ ಪ್ರಕಾಶ್ ನಾಯಕ್, ಕಾರ್ಯದರ್ಶಿ ನಯನ ಮಾಧವ್ ನಾಯಕ್, ಸತೀಶ್ಎಂ .ಬಿ, ರಾಜ್ಯ ಕೋಶಾಧಿಕಾರಿ ರಮೇಶ್ ಕೆ ಉಪಸ್ಥಿತರಿದ್ದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top