ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಅಂಗವಾಗಿ ಗಡಿಭಾಗದ ಪ್ರತಿಷ್ಠಿತ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ರವರ ಗೆಲುವಿಗಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ಮಂಜೇಶ್ವರದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಮದನಂತೇಶ್ವರ ದೇವಸ್ಥಾನ ಹಾಗೂ ಕೀರ್ತೇಶ್ವರ ಪರಿಸರ, ಕುಂಬ್ಳೆ ಪಂಚಾಯತ್ ವ್ಯಾಪ್ತಿಯ ಕುಂಟಗೇರಡ್ಕದ ಪರಿಶಿಷ್ಟ ಪಂಗಡ ಕಾಲೋನಿ, ಗುಡ್ಡೆಕೇರಿ, ಬಡಾಜೆ ಪ್ರದೇಶಗಳು ಸೇರಿದಂತೆ ಹಲವು ಮನೆಗಳಿಗೆ ಕಾರ್ಯಕರ್ತರೊಂದಿಗೆ ಭೇಟಿ ನೀಡಿದರು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು, ಸಾಧನೆಗಳನ್ನು ತಿಳಿಸಿ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಮಂಜೇಶ್ವರದಲ್ಲಿ ಈ ಬಾರಿ ತಾವರೆ ಅರಳುವುದು ಶತ ಸಿದ್ದವಾಗಿದ್ದು ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದರು.
ಪ್ರಮುಖರಾದ ರಮೇಶ್ ಹೆಗ್ಡೆ, ಪ್ರಶಾಂತ್ ಪೈ, ಪೂಜಾ ಪೈ, ವರುಣ್ ಅಂಬಟ್, ಯಾದವ ಬಡಾಜೆ, ಆದರ್ಶ್, ಹರೀಶ್ಚಂದ್ರ ಮಂಜೇಶ್ವರ, ಸೇರಿದಂತೆ ಕ್ಷೇತ್ರದ ನೂರಾರು ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

