ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಮೇ 1 ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಚಂಡಿಕಾ ಯಾಗ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಪೂರ್ವಾಹ್ನ 9 ಗಂಟೆಗೆ ಚಂಡಿಕಾಯಾಗ, 11.30ಕ್ಕೆ ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಪೂರ್ಣಾಹುತಿ ನೆರವೇರಿಸಲಿದ್ದು, ನಂತರ ಪ್ರಸಾದ ವಿತರಣೆ ಹಾಗೂ ಮಹಾ ಅನ್ನ ಸಂತರ್ಪಣೆ ನಡೆಯಲಿದೆ.
ಬ್ಯಾಂಕಿನ ಗ್ರಾಹಕರು, ಸದಸ್ಯರು, ಹಿತೈಷಿಗಳು, ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸುವಂತೆ ಬ್ಯಾಂಕಿನ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

