ಉಡುಪಿ: ಬೆಂಗಳೂರಿನಲ್ಲಿ ನಡೆದ ಕನ್ ಸ್ಯೂಮರ್ ನ್ಯೂಸ್ ರಾಷ್ಟ್ರೀಯ ಪತ್ರಿಕೆ ಹಾಗೂ ವಿಶ್ವಮಾನವ ಕಲ್ಚರಲ್ ಮತ್ತು ವೆಲ್ ಫೇರ್ ಫೌಂಡೇಶನ್ ವತಿಯಿಂದ ನಡೆದ ಅಂತರರಾಷ್ಟ್ರೀಯ ಗ್ರಾಹಕರ ದಿನಾಚರಣೆ ಸಮಾರಂಭದಲ್ಲಿ ಉಡುಪಿ ಎಂಜಿಎಂ.ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ.ಸಂತೇೂಷ ಚಂದ್ರಶೇಖರ್ ಶೆಟ್ಟಿ ಯವರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇವರು ಜಲನೆಲ ಭಾಷೆಯ ಕುರಿತಾಗಿ ನೀಡಿದ ಅನನ್ಯ ಸೇವೆಯ ಜೊತೆಗೆ ಗ್ರಾಹಕರ ಹಕ್ಕು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನೀಡಿದ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬೆಂಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೇೂಗದ ಗೌರವಾನ್ವಿತ ನ್ಯಾಯಾಧೀಶೆ ಸುಮಾ ಅನಿಲ್ ಕುಮಾರ್ ;ಸಂಸ್ಥೆಯ ಮುಖ್ಯಸ್ಥರಾದ ಡಾ.ವಿನಯ್ ಕುಮಾರ್ ವಾಯು ಸೇನಾ ನಿವೃತ್ತ ಕಮಾಂಡರ್ ಸುಭಾಷ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


