ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Upayuktha
0

 


 

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ. ಭಾಸ್ಕರಾನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ 'ಭೀಷ್ಮೋತ್ಸವ' ಆಮಂತ್ರಣ ಪತ್ರಿಕೆಯನ್ನು ಸಾಂಸ್ಕೃತಿಕ ರಾಯಭಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಬಿಡುಗಡೆಗೊಳಿಸಿ, ನಾನು ಬರುತ್ತೇನೆ, ನೀವೆಲ್ಲಾ ಬನ್ನಿ ಎಂದು ಕನ್ನಡಾಭಿಮಾನಿಗಳಿಗೆ ಕರೆಯಿತ್ತು ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

 

ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಕಸಾಪ ಗೌರವ ಸಲಹೆಗಾರ ಉಡುಪಿ ವಿಶ್ವನಾಥ್ ಶೆಣೈ, ಪ್ರೊ. ಶಂಕರ್,  ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಗೌರವ ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ, ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್, ಸಂಘಟನಾ ಕಾರ್ಯದರ್ಶಿ  ರಾಘವೇಂದ್ರ ಪ್ರಭು ಕವಾ೯ಲು, ವಸಂತ್, ದೀಪಾ ಕರ್ಕಿ, ಚಂದ್ರಶೇಖರ್, ಸಾಮಾಜಿಕ ಜಾಲತಾಣ ಸಂಚಾಲಕ ಸಿದ್ದ ಬಸಯ್ಯ ಸ್ವಾಮಿ ಚಿಕ್ಕ ಮಠ ಮೊದಲಾದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top