ದಾವಣಗೆರೆ:
ಇಲ್ಲಿನ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ 71ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಾವಣಗೆರೆ ಜಿಲ್ಲೆಯ ಹರಿಹರದ ಪತ್ರಕರ್ತೆ ಶ್ರೀಮತಿ ಡಿ.ಎನ್. ಶಾಂಭವಿ ನಾಗರಾಜ್ರವರಿಗೆ “ಕರುನಾಡ ಕನ್ನಡ ಕಣ್ಮಣಿ”ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್ ರಾಯ್ಕರ್ ತಿಳಿಸಿದ್ದಾರೆ.
ನಿರಂತರವಾಗಿ ಕಠಿಣ ಪರಿಶ್ರಮದಿಂದ ಒಬ್ಬ ಮಹಿಳೆ ಪತ್ರಿಕೋದ್ಯಮದಲ್ಲಿ ಮಾಡಿದ ಸಾಧನೆಗೆ ಈ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ.
ಯಾವುದೇ ನಿರೀಕ್ಷೆ, ಅಪೇಕ್ಷೆ ಇಲ್ಲದೇ ಕಲಾಕುಂಚದ ವರದಿಗಳನ್ನು ನಿರಂತರವಾಗಿ ‘ಲೋಕಪ್ರಭ” ದಿನಪತ್ರಿಕೆಯಲ್ಲಿ ಪ್ರಕಟಿಸಿದ ದಿನಪತ್ರಿಕೆಯ ಸಂಪಾದಕರಾದ ಶ್ರೀಮತಿ ಡಿ.ಎನ್. ಶಾಂಭವಿ ನಾಗರಾಜ್ರವರಿಗೆ ಕಲಾಕುಂಚದ ಸರ್ವ ಸದಸ್ಯರು, ಪದಾಧಿಕಾರಿಗಳು ಇವರಿಗೆ ಅಭಿಮಾನದಿಂದ ಅಭಿನಂದಿಸಿ ಕಲಾಕುಂಚದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಶುಭ ಹಾರೈಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


