ಕಾಸರಗೋಡು: ಬಂದಡ್ಕ ಗಡಿನಾಡ ಕನ್ನಡಿಗರ ಸಂಘ (ರಿ) ಇದರ ನೂತನ ಸಾಂಸ್ಕೃತಿಕ ಭವನದ ಉದ್ಘಾಟನೆ ಇತ್ತೀಚೆಗೆ ಸಂಘದ ಅಧ್ಯಕ್ಷ ಪುರುಷೋತ್ತಮ ಬೊಡ್ಡನಕೊಚ್ಚಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಸದಸ್ಯರಾದ ಶ್ರೀಮತಿ ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಡಾ|ವಾಣಿಶ್ರೀ ಕಾಸರಗೋಡು ಸಾರಥ್ಯದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ) ಕಾಸರಗೋಡು ಇವರಿಂದ ಕನ್ನಡ ಸಾಹಿತ್ಯ ಗಾನ ನೃತ್ಯ ವೈಭವ ಎಂಬ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮವು ವಿಭಿನ್ನ ರೀತಿಯಲ್ಲಿ ಮೂಡಿಬಂತು. ಹುಲಿ ಕುಣಿತ, ಯಕ್ಷ ನೃತ್ಯ, ಸ್ಯಾಕ್ಸೋಫೋನ್ ವಾದನ, ಶಿವಲಿಂಗ ದರ್ಶನ, ಜೋಡಿ ಯೋಗ ನೃತ್ಯ ಮಕ್ಕಳಿಂದ ಸಮೂಹ ನೃತ್ಯ ಬಹುವಿಧದ ಸಾಹಸಮಯ ನೃತ್ಯಗಳು ಪ್ರದರ್ಶನಗೊಂಡವು.
ವೇದಿಕೆಯಲ್ಲಿ ಡಾ|ವಾಣಿಶ್ರೀ ಕಾಸರಗೋಡು ಇವರನ್ನು ಗೌರವಿಸಲಾಯಿತು. ಭಾಗವಹಿಸಿದ ಎಲ್ಲಾ ಕಲಾವಿದರಿಗೆ ಬಂದಡ್ಕ ಕನ್ನಡಿಗರ ಸಂಘದ ವತಿಯಿಂದ ಗೌರವ ಧನ ಕೊಟ್ಟು ಪುರಸ್ಕರಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


