ಕನ್ನಡ ಪುಸ್ತಕ ಪ್ರಾಧಿಕಾರ: ಉಡುಪಿಯಲ್ಲಿ ಮನೆಗೊಂದು ಗ್ರಂಥಾಲಯ ಅಭಿಯಾನ

Upayuktha
0

 


ಉಡುಪಿ: ಕರ್ನಾಟಕ ಸರ್ಕಾರ ಕನ್ನಡ ಪುಸ್ತಕ ಪ್ರಾಧಿಕಾರ ಇದರ ವತಿಯಿಂದ ಮನೆಗೊಂದು ಗ್ರಂಥಾಲಯ ಅಭಿಯಾನದ ಅಂಗವಾಗಿ ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

 

ಸಂದರ್ಭದಲ್ಲಿ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಇವರು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವ್ಯಾಸರಾಜ ತಂತ್ರಿ ಮತ್ತು ಡಾ. ವಿದ್ಯಾ ತಂತ್ರಿ ಅವರನ್ನು ವಿಶೇಷ ಪ್ರಮಾಣ ಪತ್ರ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಪ್ರಾಧಿಕಾರದ ವಿಶೇಷ ಕರಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

 

ಸಂದರ್ಭದಲ್ಲಿ ಆಸ್ಪತ್ರೆಯ ಪ್ರಮುಖರಾದ ಲಕ್ಷ್ಮಿ ಹರಿಶ್ಚಂದ್ರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕ ಅಧ್ಯಕ್ಷ ರವಿ ರಾಜ್ಎಚ್. ಪಿ, ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಪದಾಧಿಕಾರಿಗಳಾದ ಪೂರ್ಣಿಮಾ ಜನಾರ್ದನ್, ಸಿದ್ದ ಬಸಯ್ಯಸ್ವಾಮಿ ಚಿಕ್ಕಮಠ, ದೀಪಾ ಕರ್ಕಿ, ಆರ್ ವಸಂತ್, ಮನೆಯೇ ಗ್ರಂಥಾಲಯ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top