ದ್ವೇಷಾಸೂಯೆ ಅಹಂಕಾರಗಳೇ ಸಂಘರ್ಷಕ್ಕೆ ಮೂಲ: ಡಾ. ವಿನಾಯಕ ಭಟ್ ಗಾಳಿಮನೆ

Upayuktha
0

  


ಕಾಂತಾವರ: ಕೌರವರು ಧೃತರಾಷ್ಟ್ರನ ಅರಮನೆಯಲ್ಲಿ ಬೆಳೆಯುತ್ತಿರುವಾಗಲೇ ಋಷಿ ಮುನಿಗಳೆಲ್ಲರ ಆಶಯದಂತೆ ಅವರ ಸಂಪೂರ್ಣ ಆಶೀರ್ವಾದ ಪಡೆದ ಪಾಂಡವರನ್ನು ತನ್ನ ಮಕ್ಕಳ ಜೊತೆ ಧೃತರಾಷ್ಟ್ರನು ಸೇರಿಸಿಕೊಂಡ. ಆದರೆ ದುರ್ಯೋಧನನಿಗೆ ಇವರೆಲ್ಲರ ಮೇಲೆ ಬಾಲ್ಯದಿಂದಲೇ ಮೈಮನಸ್ಸು ಹುಟ್ಟಿ ಅದು ನಾನಾ ಕಾರಣಗಳಿಂದ  ಬೆಳೆಯುತ್ತಲೇ ಹೋಗುತ್ತದೆ. ಭೀಮನನ್ನು ವಿಷ ಪ್ರಾಶನದಿಂದ ಕೊಲ್ಲಲ್ಲು ಪ್ರಯತ್ನಿಸಿದರೂ ಆತ ಮತ್ತೆ ನೂರಾನೆ ಬಲದೊಂದಿಗೆ ಮರಳಿ ಬರುತ್ತಾನೆ. ಮಹಾಭಾರತದ ಭಾವದೀಪ ಆರದಂತೆ ನೋಡಿಕೊಂಡ ಭೀಷ್ಮ ಮಹಾತ್ಮರಿಗೂ ಇವರ ವೈಷಮ್ಯವನ್ನು ಕೊನೆಗಾಣಿಸಲು ಸಾಧ್ಯವಾಗಲಿಲ್ಲ ಎಂಬುದಾಗಿ ವಿದ್ವಾಂಸರಾದ ಡಾ. ವಿನಾಯಕ ಭಟ್ ಗಾಳಿಮನೆ ತಿಳಿಸಿದರು.

 

ಇವರು ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ 2026 ವರ್ಷಪೂರ್ತಿ ಪ್ರತೀ ತಿಂಗಳು ನಡೆಯುತ್ತಿರುವ ಮಹಾಭಾರತ ಭಾವದೀಪ ಎಂಬ ಉಪನ್ಯಾಸಮಾಲೆಯ ಪಂಚಮ ಸೋಪಾನದಲ್ಲಿಕುಲವೊಂದು ಕವಲೆರಡುಎಂಬ ವಿಷಯದ ಕುರಿತಾಗಿ ಮೇ 23ರಂದು ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

 

ಋಷಿ ಪರಂಪರೆಯ ದ್ರೋಣ ಮತ್ತು ರಾಜ ಪರಂಪರೆಯ ದ್ರುಪದ ಗುರುಕುಲದಲ್ಲಿ ಸ್ನೇಹಿತರಾಗಿದ್ದರೂ ಮುಂದೆ ದ್ರುಪದ ರಾಜನಾದಾಗ ದ್ರೋಣರು ಅರಮನೆಗೆ ಹೋದಾಗ ದ್ರುಪದನು ಅಹಂಕಾರದಿಂದ ಅವರನ್ನು ಅವಮಾನಿಸುತ್ತಾನೆ. ಆತ್ಮಭಿಮಾನಕ್ಕಾದ ಅವಮಾನವು ಸೇಡಾಗಿ ಪರಿವರ್ತನೆಗೊಂಡು ಮುಂದೆ ಸಂಘರ್ಷಕ್ಕೆ ಕಾರಣವಾಗಿ ದ್ರುಪದನ ಗರ್ವಭಂಗವಾಗುತ್ತದೆ. ಹೀಗೆ ದ್ವೇಷ, ಅಸೂಯೆ, ಅಹಂಕಾರಗಳೇ ಯುದ್ಧಕ್ಕೆ ಪ್ರೇರಣೆಯಾದವು ಎಂದರು.

 

ಡಾ.ನಾ.ಮೊಗಸಾಲೆ, ನಿತ್ಯಾನಂದ ಪೈ, ಮಿತ್ರಪ್ರಭಾ ಹೆಗ್ಡೆ, ಏರ್ವೈಸ್ ಮಾರ್ಷೆಲ್ ರಮೇಶ್ ಕಾರ್ಣಿಕ್, .ಭಾ.ಸಾ.. . ಜಿಲ್ಲಾ ಸಂಯೋಜಕರಾದ ಸುಂದರ ಶೆಟ್ಟಿ ಇಳಂತಿಲ, ಕಾರ್ಯಕ್ರಮದ ಸಂಪೂರ್ಣ ಪ್ರಾಯೋಜಕರಾದ ಪಲ್ಲವಿ ಕೀರ್ತನ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರುಜಯಶ್ರೀ ಆದಿರಾಜ ಅಜ್ರಿ ಪ್ರಾರ್ಥಿಸಿ ಡಾ. ಸುಮತಿ ಪಿ. ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಸುಲೋಚನಾ ಬಿ.ವಿ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top