ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕಲಾಕುಂಚ ಕೇರಳದ ಗಡಿನಾಡಿನ ಶಾಖೆಯ ಘಕಟದಿಂದ ಮೇ 24 ರಂದು ಭಾನುವಾರ ಅಪರಾಹ್ನ 3 ಗಂಟೆ ಯಿಂದ ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿಯ ನಾರಾಯಣ ಮಂಗಲ “ಶ್ರೀನಿಧಿ” ಸಭಾಂಗಣದಲ್ಲಿ “ಸಾಹಿತ್ಯಾಭಿಯಾನ” ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಹಿರಿಯ
ಸಾಹಿತಿ, ಗ್ರಂಥಾಲಯ ಸಂಗ್ರಹದ ಪುರಾತನ ಕಾಲದ ಗ್ರಂಥಗಳ ಬಗ್ಗೆ
ವಿ.ಬಿ.ಕುಳಮರ್ವ ಸಾಹಿತ್ಯಾಭಿಯಾನ
ನಡೆಸಿಕೊಡಲಿದ್ದಾರೆ. ಆಧ್ಯಾತ್ಮ ಪರಂಪರೆಯ ಸಾಹಿತ್ಯ ಬಗ್ಗೆ ಹಿರಿಯ, ಕಿರಿಯರು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಾಹಿತ್ಯ ಅಭಿಯಾನ
ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಕೇರಳದ ಗಡಿನಾಡಿನ ಶಾಖೆಯ ಸಂಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿ ಕಾರಂತ್ರವರು ವಿನಂತಿಸಿದ್ದಾರೆ.
ಮಕ್ಕಳ
ವಿದ್ಯಾಭ್ಯಾಸಕ್ಕೆ ಜ್ಞಾನ, ಪರಿಜ್ಞಾನ ಹೆಚ್ಚಿಸಲು ಮಕ್ಕಳ ಮುಂದಿನ ಭವಿಷ್ಯಕ್ಕೆ ದಿವ್ಯ, ಭವ್ಯ ನಾಂದಿಯಾಗಲಿ ಎಂದು
ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್
ಪ್ರಕಟಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


