ಭಾಷೆ ಶ್ರೇಷ್ಠತೆಯನ್ನು ಓದಿನಿಂದ ಸಾಧಿಸಲು ಸಾಧ್ಯ: ಪ್ರೊ. ಗಣಪತಿ ಗೌಡ

Upayuktha
0


ಮಂಗಳೂರು: ಯಾವುದೇ ಭಾಷೆಯನ್ನು ಪದೆ ಪದೇ ಓದುವುದರಿಂದ ಮಾತ್ರ ಭಾಷೆ ಶ್ರೇಷ್ಠತೆಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ.ಗಣಪತಿ ಗೌಡ ಹೇಳಿದರು.


ನಗರದ ವಿಶ್ವವಿದ್ಯಾಲಯ ಕಾಲೇಜಿನ ಇಂಗ್ಲಿಷ್‌ ವಿಭಾಗದ ಭಾಷೆ ಸಂಘ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ರವೀಂದ್ರನಾಥ ಟ್ಯಾಗೋರ್ ಮತ್ತು ವಿಲಿಯಂ ಶೇಕ್ಸ್ಪಿಯರ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಶಿವರಾಮ ಕಾರಂತ ಸಭಾಂಗಣದಲ್ಲಿ ಕಾವ್ಯ ವಾಚನ ಕಾರ್ಯಕ್ರಮದಲ್ಲಿ ಮಾತನಾಡಿದರು.


ನಿರಂತರ ಓದುವಿಕೆ, ಕೇಳುವಿಕೆಯನ್ನು ಅಭ್ಯಾಸ ಮಾಡುತ್ತಾ, ಮಾತು ಬರವಣಿಗೆಯ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಾಗ ಆಂಗ್ಲ ಭಾಷೆಯನ್ನು ಸುಲಭವಾಗಿ ಕಲಿಯಲು ಸಾಧ್ಯ. ಇಂದು ರವೀಂದ್ರನಾಥ ಟ್ಯಾಗೋರ್ ಹಾಗೂ ವಿಲಿಯಂ ಶೇಕ್ಸ್ಪಿಯರ್ ಇಬ್ಬರು ಕವಿಗಳ ಜನ್ಮ ದಿನಾಚರಣೆಗಳನ್ನು ಜಂಟಿಯಾಗಿ ಆಚರಿಸುತ್ತಿರುವುದು ಪೂರ್ವ ಮತ್ತು ಪಾಶ್ಚಿಮಾತ್ಯ ಸಂಪ್ರದಾಯಗಳ ಕಾಲಾತೀತ ಕಾವ್ಯ ಪರಂಪರೆಗೆ ದೊಡ್ಡ ಗೌರವ ನೀಡಿದಂತಾಗುತ್ತದೆ ಎಂದರು.


ವಿಶೇಷವಾಗಿ ಗ್ರಾಮೀಣ ಪ್ರದೇಶದ ಹಿನ್ನಲೆ ಇರುವ ವಿದ್ಯಾರ್ಥಿಗಳಿಗೆ ಇಂಗ್ಲಿಷ್  ಭಾಷೆ ಯಾವಾಗಲೂ ಕಷ್ಟಕರ ಎನಿಸುತ್ತದೆ. ಅಲ್ಲದೇ, ಸಂವಹನ ಕೌಶಲ್ಯದ ಕೊರತೆ ಕಾರಣದಿಂದಲೂ ಇಂಗ್ಲಿಷ್‌ ಭಾಷೆ ಕಠಿಣವೆನಿಸುತ್ತದೆ. ಎಐ ಎಲ್ಲಾ ಕ್ಷೇತ್ರಗಳಲ್ಲೂ ಪ್ರಾಬಲ್ಯ ಸಾಧಿಸಿರುವುದರಿಂದ ವಾಕ್ಯ ರಚನೆ, ಅನುವಾದ ಸುಲಭವಾಗಿಸಿದೆ. ಆದರೆ, ಎಐ ವಿಷಯದೊಳಗಿನ ಭಾವವನ್ನು ಗಮನಿಸುವುದಿಲ್ಲ, ಕೇವಲ ಭಾಷೆಗೆ ಮಾತ್ರವೇ ಸೀಮಿತವಾಗಿರುತ್ತದೆ.


ಇದರಿಂದ ಭಾಷೆ ಶ್ರೇಷ್ಠತೆ ಸಾಧಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಿರಂತರ ಓದಿನ ಕಡೆಗೆ ಹೆಚ್ಚಿನ ಗಮನ ನೀಡಬೇಕಿದೆ ಎಂದು ಸಲಹೆ ನೀಡಿದರು.


ಇಂಗ್ಲಿಷ್‌ ವಿಭಾಗದ ಮುಖ್ಯಸ್ಥೆ ಪ್ರೊ. ಸುಭಾಷಿಣಿ ಶ್ರೀವತ್ಸ ಸೇರಿದಂತೆ ನಾನಾ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top