ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೌದ್ಧ, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ಖ ಜನಾಂಗದ (ಕ್ರಿಶ್ಚಿಯನ್ ಸಮುದಾಯವನ್ನು ಹೊರತುಪಡಿಸಿ) 2026-27 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿ.ಇ.ಟಿ/ ನೀಟ್ (ಎಂ.ಬಿ.ಬಿ.ಎಸ್/ಬಿ.ಡಿ.ಎಸ್/ಆಯುಷ್/ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬಿ.ಇ/ ಬಿ.ಟೆಕ್,ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್,ವೆಟರ್ನರಿ ಆ್ಯಂಡ್ ಫಾರ್ಮ್ ಸೈನ್ಸ್ ಕೋರ್ಸಸ್) ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯೊಂದಿಗೆ
ಸಲ್ಲಿಸಬೇಕಾದ ದಾಖಲೆಗಳು:
ಜಾತಿ
ಮತ್ತು ಆದಾಯ ಪ್ರಮಾಣ ಪತ್ರ
(ರೂ. 8 ಲಕ್ಷ ಮಿತಿಯಲ್ಲಿರಬೇಕು), ಆಧಾರ್
ಕಾರ್ಡ್ ಮತ್ತು ರೇಶನ್ ಕಾರ್ಡ್ ಜೆರಾಕ್ಸ್ ಪ್ರತಿ, ಸಿ.ಇ.ಟಿ/ನೀಟ್ ಪರೀಕ್ಷೆ ಪ್ರವೇಶ
ಪತ್ರ, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಅಂಕ
ಪಟ್ಟಿಯ ದೃಢೀಕೃತ ಪ್ರತಿ, ಇಂಡಿಮ್ನಿಟಿ ಬಾಂಡ್, ವಿದ್ಯಾರ್ಥಿ ಮತ್ತು ಪೋಷಕರ 2 ಭಾವಚಿತ್ರ.

